Advertisement

Indi ; ಚಿಕಿತ್ಸೆ ವಿಳಂಬದಿಂದ ರೋಗಿ ಸಾವು: ಆಸ್ಪತ್ರೆ ಎದುರು ಟೈರ್‌ ಗೆ ಬೆಂಕಿ ಆಕ್ರೋಶ

05:08 PM Nov 01, 2023 | Team Udayavani |

ಇಂಡಿ(ವಿಜಯಪುರ): ಪಟ್ಟಣದ ತಾಲೂಕು ಆಸ್ಪತ್ರೆಯಲ್ಲಿ ಡಯಾಲಿಸಿಸ್‌ ಚಿಕಿತ್ಸೆ ಪಡೆಯುತ್ತಿದ್ದ ರೋಗಿ ಚಿಕಿತ್ಸೆ ವಿಳಂಬವಾಗಿ ಮೃತಪಟ್ಟಿದ್ದಾರೆ ಎಂದು ಆರೋಪಿಸಿ ಕುಟುಂಬಸ್ಥರು ಆಸ್ಪತ್ರೆಯ ಎದುರು ಟೈರ್‌ ಗೆ ಬೆಂಕಿ ಹಚ್ಚಿ ಆಕ್ರೋಶ ಹೊರ ಹಾಕಿರುವ ಘಟನೆ ಬುಧವಾರ ನಡೆದಿದೆ.

Advertisement

ಬಿಸ್ಮಿಲಾ ಸೈಫನಸಾಬ್ ನದಾಫ್ ಮೃತ ದುರ್ದೈವಿ, ಪ್ರತಿಭಟನಾ ನಿರತರು ವೈದ್ಯರ ವಿರುದ್ಧ ಘೋಷಣೆ ಕೂಗಿ ಆಕ್ರೋಶ ಹೊರ ಹಾಕಿದ್ದು, ವೈದ್ಯರ ವಿರುದ್ಧ ಕ್ರಮಕ್ಕೆ ಆಗ್ರಹಿಸಿದ್ದಾರೆ.

ಇಂಡಿ ಶಹರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು , ಪೊಲೀಸರು ಸ್ಥಳಕ್ಕೆ ದೌಡಾಯಿಸಿ ತನಿಖೆ ನಡೆಸುತ್ತಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next