Advertisement

ಭಾರತ ಹಿಂದೂಗಳ ದೇಶ, ಹಿಂದುತ್ವವಾದಿಗಳದ್ದಲ್ಲ: ರಾಹುಲ್ ಗಾಂಧಿ

03:38 PM Dec 12, 2021 | Team Udayavani |

ಜೈಪುರ: ಭಾರತವು ಹಿಂದೂಗಳ ದೇಶವೇ ಹೊರತು, ಯಾವುದೇ ಪರಿಸ್ಥಿತಿಯಲ್ಲೂ ಅಧಿಕಾರದಲ್ಲಿರಲು ಬಯಸುವ ಹಿಂದುತ್ವವಾದಿಗಳದ್ದಲ್ಲ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಭಾನುವಾರ ಕಿಡಿ ಕಾರಿದ್ದಾರೆ.

Advertisement

ಏರುತ್ತಿರುವ ಹಣದುಬ್ಬರದ ವಿರುದ್ಧದ ರಾಲಿಯನ್ನು ಉದ್ದೇಶಿಸಿ ಮಾತನಾಡಿದ ರಾಹುಲ್, ದೇಶದಲ್ಲಿ ಹಣದುಬ್ಬರವಿದ್ದು, ಸಂಕಷ್ಟ ಎದುರಾಗಿದ್ದರೆ ಅದನ್ನು ಮಾಡಿದ್ದು ಹಿಂದುತ್ವ ವಾದಿಗಳು ಎಂದರು.

ಎನ್‌ಡಿಎ ಆಡಳಿತಾವಧಿಯಲ್ಲಿ ಅವರ ಸ್ನೇಹಿತರು ದೇಶವನ್ನು “ಹಾಳು ಮಾಡಿದ್ದಾರೆ” ಎಂದು ಪ್ರಧಾನಿ ನರೇಂದ್ರ ಮೋದಿ ಅವರನ್ನು ಗುರಿಯಾಗಿಸಿಕೊಂಡು ವಾಗ್ದಾಳಿ ನಡೆಸಿದರು.

ಮೋದಿ ಜಿ ಮತ್ತು ಅವರ ಮೂರ್ನಾಲ್ಕು ಕೈಗಾರಿಕೋದ್ಯಮಿ ಸ್ನೇಹಿತರು ಏಳು ವರ್ಷಗಳಲ್ಲಿ ದೇಶವನ್ನು ಹಾಳುಮಾಡಿದ್ದಾರೆ” ಎಂದು ರಾಹುಲ್ ಆರೋಪಿಸಿದರು.

“ನಾನು ಹಿಂದೂ ಆದರೆ ಹಿಂದುತ್ವವಾದಿ ಅಲ್ಲ” ಎಂದು ಅವರು ಹೇಳಿದರು.

Advertisement
Advertisement

Udayavani is now on Telegram. Click here to join our channel and stay updated with the latest news.

Next