Advertisement

ಭಾರತಕ್ಕೆ ಪಾಕಿಸ್ತಾನ, ಶ್ರೀಲಂಕಾದಂತಹ ಸ್ಥಿತಿ ಬರಲ್ಲ: ರಘುರಾಮ್‌ ರಾಜನ್‌

10:03 PM Jul 30, 2022 | Team Udayavani |

ನವದೆಹಲಿ: ಭಾರತದಲ್ಲಿ ಶ್ರೀಲಂಕಾ ಅಥವಾ ಪಾಕಿಸ್ತಾನದ ಸ್ಥಿತಿ ಉದ್ಭವವಾಗದು ಎಂದು ಆರ್‌ಬಿಐನ ಮಾಜಿ ಗವರ್ನರ್‌ ರಘುರಾಮ್‌ ರಾಜನ್‌ ಅವರು ಅಭಿಪ್ರಾಯಪಟ್ಟಿದ್ದಾರೆ.

Advertisement

ವಿದೇಶಿ ವಿನಿಮಯ ಸಂಗ್ರಹ ವಿಚಾರದಲ್ಲಿ ರಿಸರ್ವ್‌ ಬ್ಯಾಂಕ್‌ ಆಫ್ ಇಂಡಿಯಾ ಉತ್ತಮ ಕೆಲಸ ಮಾಡುತ್ತಿದೆ. ಅಲ್ಲದೇ, ಭಾರತದಲ್ಲಿ ವಿದೇಶಿ ವಿನಿಮಯ ಸಂಗ್ರಹದ ಪ್ರಮಾಣವೂ ಚೆನ್ನಾಗಿಯೇ ಇದೆ. ನಮ್ಮ ವಿದೇಶಿ ಸಾಲದ ಪ್ರಮಾಣವೂ ಕಡಿಮೆ ಇದೆ ಎಂದು ಹೇಳಿದ್ದಾರೆ.

ಹೀಗಾಗಿ, ಶ್ರೀಲಂಕಾ ಮತ್ತು ಪಾಕಿಸ್ತಾನದ ಸಮಸ್ಯೆಗಳೂ ನಮ್ಮಲ್ಲಿ ಇಲ್ಲ ಎಂದು ತಿಳಿಸಿದ್ದಾರೆ.

ಜು.22ಕ್ಕೆ ಅಂತ್ಯಗೊಂಡ ವಾರದಲ್ಲಿ ಭಾರತದ ವಿದೇಶಿ ವಿನಿಮಯ ಸಂಗ್ರಹ 571 ಬಿಲಿಯನ್‌ ಡಾಲರ್‌ನಷ್ಟಿದೆ. ಆದರೆ, ಅದೇ ಅವಧಿಯಲ್ಲಿ ವಿದೇಶಿ ವಿನಿಮಯ ಸಂಗ್ರಹ 1.152 ಬಿಲಿಯನ್‌ ಡಾಲರ್‌ನಷ್ಟು ಕಡಿಮೆಯಾಗಿದೆ.

Advertisement

Udayavani is now on Telegram. Click here to join our channel and stay updated with the latest news.

Next