Advertisement

ಅನ್ನದಾತ ಎಂದೂ ನೆತ್ತರು ಹರಿಸುವುದಿಲ್ಲ; ‘ಕಾಣದ ಕೈಗಳು’ ಅವರ ದಿಕ್ಕು ತಪ್ಪಿಸಿವೆ: ಸುಧಾಕರ್

07:23 PM Jan 26, 2021 | Team Udayavani |

ಬೆಂಗಳೂರು: ದೆಹಲಿಯಲ್ಲಿ ನಡೆದ ಗಲಭೆ ರೈತರ ಹೆಸರಿನಲ್ಲಿ ಪ್ರತಿಭಟನೆ ನಡೆಸುತ್ತಿರುವವರ ಮುಖವಾಡವನ್ನು ಕಳಚಿದೆ ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ. ಕೆ ಸುಧಾಕರ್ ತಿಳಿಸಿದ್ದಾರೆ.

Advertisement

ರೈತ ಬಾಂಧವರನ್ನು ದಿಕ್ಕು ತಪ್ಪಿಸುತ್ತಿರುವ ಕಾಣದ ಕೈಗಳು ಇನ್ನಾದರೂ ತಮ್ಮ ಪಟ್ಟಭದ್ರ ಹಿತಾಸಕ್ತಿಗಳು, ರಾಜಕೀಯ ದುರುದ್ದೇಶಗಳನ್ನು ಬದಿಗಿಟ್ಟು, ರೈತರ ಹಿತ ಕಾಯುವ ಮೂಲಕ ಪ್ರಾಯಶ್ಚಿತ ಮಾಡಿಕೊಳ್ಳಬೇಕು. ಇಲ್ಲವಾದರೆ ಜನ ಎಂದಿಗೂ ಅವರನ್ನು ಕ್ಷಮಿಸುವುದಿಲ್ಲ.

ಅನ್ನ ನೀಡುವ ರೈತ ಭೂತಾಯಿಯಷ್ಟೇ ಸಹನಾಮಯಿ. ನೇಗಿಲ ಹಿಡಿಯುವ ಯೋಗಿ ಎಂದೂ ಅಸ್ತ್ರ ಹಿಡಿಯುವುದಿಲ್ಲ. ತುತ್ತು ನೀಡುವ ಅನ್ನದಾತ ಎಂದೂ ನೆತ್ತರು ಹರಿಸುವುದಿಲ್ಲ. ದೇಶದ ಬೆನ್ನೆಲುಬಾಗಿರುವ ಕೃಷಿಕ ಎಂದೂ ದೇಶ ತಲೆತಗ್ಗಿಸುವ ಕೆಲಸ ಮಾಡಲಾರ ಎಂದು ಸುಧಾಕರ್ ಟ್ವೀಟ್ ಮೂಲಕ ತಿಳಿಸಿದ್ದಾರೆ.

ಇದನ್ನೂ ಓದಿ:  ದೆಹಲಿಯಲ್ಲಿ ಹೆಚ್ಚುವರಿ ಅರೆಸೇನಾಪಡೆ ನಿಯೋಜನೆ, ಉನ್ನತ ಮಟ್ಟದ ಸಭೆ; ಇಂಟರ್ನೆಟ್ ಸ್ಥಗಿತ

Advertisement

Udayavani is now on Telegram. Click here to join our channel and stay updated with the latest news.

Next