Advertisement

ರಾಜ್ಯದ ಸಚಿವರ ಸಮ್ಮುಖ ಇಸ್ರೇಲ್‌ನಲ್ಲಿ ರಾಷ್ಟ್ರಧ್ವಜಕ್ಕೆ ಅವಮಾನ 

01:21 PM Sep 07, 2018 | Team Udayavani |

ಬೆಂಗಳೂರು: ಇಸ್ರೇಲ್‌ನಲ್ಲಿ ಭಾರತದ ಧ್ವಜಕ್ಕೆ ಅವಮಾನ ಮಾಡಿದ ಘಟನೆ ನಡೆದಿದ್ದು, ಆ ಫೋಟೋ ಸಾಮಾಜಿಕ ತಾಣಗಳಲ್ಲಿ ಹರಿದಾಡುತ್ತಿದ್ದು ವ್ಯಾಪಕ ಟೀಕೆ ವ್ಯಕ್ತವಾಗಿದೆ. 

Advertisement

ತೋಟಗಾರಿಕಾ ಸಚಿವ ಎಂ.ಸಿ.ಮನಗೂಳಿ ಅವರು ತೋಟಗಾರಿಕಾ ಬೆಳೆಗಳ ಅಧ್ಯಯನಕ್ಕಾಗಿ ಇಸ್ರೇಲ್‌ ಪ್ರವಾಸಕ್ಕೆ ತೆರಳಿದ್ದ ವೇಳೆ ಈ ಘಟನೆ ನಡೆದಿದೆ. 

ಅಧಿಕಾರಿಗಳೊಂದಿಗೆ ಸಚಿವರು ಚರ್ಚೆ ನಿರತರಾಗಿದ್ದ ವೇಳೆ ರಾಷ್ಟ್ರಧ್ವಜ ತಲೆ ಕೆಳಗಾಗಿ ಹಾರಾಡುತ್ತಿತ್ತು. 

ಕರ್ನಾಟಕದ ಅಧಿಕಾರಿಗಳು ಮತ್ತು ಸಚಿವರು ಧ್ವಜವನ್ನು ಸರಿಮಾಡಬಹುದಿತ್ತಲ್ಲಾ, ಇಲ್ಲವಾದಲ್ಲಿ ಸರಿ ಮಾಡಲು ಹೇಳಬಹುದಿತ್ತಲ್ಲಾ ಎನ್ನುವ ಪ್ರಶ್ನೆ ಸಾರ್ವಜನಿಕ ವಲಯದಲ್ಲಿ ಕೇಳಿ ಬಂದಿದೆ. 

Advertisement

Udayavani is now on Telegram. Click here to join our channel and stay updated with the latest news.

Next