Advertisement

ಕಾಬೂಲ್‌ ದಾಳಿ: 100 ಮಂದಿಗೆ ಇ-ವೀಸಾ ಮಂಜೂರು ಮಾಡಿದ ಕೇಂದ್ರ ಸರ್ಕಾರ 

09:45 PM Jun 19, 2022 | Team Udayavani |

ಕಾಬೂಲ್‌/ನವದೆಹಲಿ: ಅಫ್ಘಾನಿಸ್ತಾನದಲ್ಲಿ ಇರುವ ಹಿಂದೂಗಳು ಮತ್ತು ಸಿಖ್‌ ಸಮುದಾಯದ 111 ಮಂದಿಗೆ ಕೇಂದ್ರ ಸರ್ಕಾರ ಇ-ವೀಸಾ ಮಂಜೂರು ಮಾಡಿದೆ.

Advertisement

ಶನಿವಾರ ಕಾಬೂಲ್‌ನಲ್ಲಿ ಇರುವ ಗುರುದ್ವಾರದ ಮೇಲೆ ದಾಳಿ ನಡೆದ ಬಳಿಕ ಮತ್ತು ಅಫ್ಘಾನಿಸ್ತಾನದಲ್ಲಿರುವ ಸದ್ಯದ ಭದ್ರತಾ ಸ್ಥಿತಿಯನ್ನು ಪರಿಗಣಿಸಿ ಕೇಂದ್ರ ಸರ್ಕಾರ ಆದ್ಯತೆಯ ಮೇರೆಗೆ ಈ ನಿರ್ಧಾರ ಕೈಗೊಂಡಿದೆ ಎಂದು ಹೇಳಲಾಗಿದೆ.

ಈ ನಡುವೆ, ಕಾಬೂಲ್‌ ಗುರುದ್ವಾರದ ಮೇಲಿನ ದಾಳಿಯ ಹೊಣೆಯನ್ನು ಐಸಿಸ್‌ ಉಗ್ರ ಸಂಘಟನೆ ಹೊತ್ತುಕೊಂಡಿದೆ. ಮತ್ತೊಂದೆಡೆ, ಘಟನೆಗೆ ಸಂಬಂಧಿಸಿದಂತೆ ತನಿಖೆಯ ಹೊಣೆಯನ್ನು ರಾಷ್ಟ್ರೀಯ ತನಿಖಾ ದಳಕ್ಕೆ ಹಸ್ತಾಂತರಿಸುವ ಸಾಧ್ಯತೆ ಇದೆ.

Advertisement

Udayavani is now on Telegram. Click here to join our channel and stay updated with the latest news.

Next