Advertisement

ಕೋವಿಡ್ ಹೋರಾಟ; ಸೂಕ್ತ ಸಮಯದ ನಿರ್ಧಾರದಿಂದ ಭಾರತ ಉತ್ತಮ ಸ್ಥಿತಿಯಲ್ಲಿದೆ: ಪ್ರಧಾನಿ

07:41 PM Jul 27, 2020 | Nagendra Trasi |

ನವದೆಹಲಿ: ಸರಿಯಾದ ಸಮಯಕ್ಕೆ ಕೇಂದ್ರ ಸರ್ಕಾರ ಸಮರ್ಪಕ ನಿರ್ಧಾರ ತೆಗೆದುಕೊಂಡ ಪರಿಣಾಮ ಕೋವಿಡ್ 19 ಸೋಂಕಿನ ವಿರುದ್ಧ ಭಾರತ ಇತರ ದೇಶಗಳಿಗಿಂತ ತುಂಬಾ ಉತ್ತಮವಾಗಿ ಹೋರಾಡಿರುವುದಾಗಿ ಪ್ರಧಾನಿ ನರೇಂದ್ರ ಮೋದಿ ಸೋಮವಾರ (ಜುಲೈ27) ವಿಶ್ಲೇಷಿಸಿದ್ದಾರೆ.

Advertisement

ದೇಶದಲ್ಲಿ ಸರಿಯಾದ ಸಂದರ್ಭಕ್ಕೆ ಸಮರ್ಪಕವಾದ ನಿರ್ಧಾರವನ್ನು ತೆಗೆದುಕೊಂಡಿದ್ದರಿಂದಲೇ ಕೋವಿಡ್ 19 ಹೋರಾಟದಲ್ಲಿ ಬೇರೆ ದೇಶಗಳಿಗಿಂತ ನಾವು ಉತ್ತಮವಾಗಿದ್ದೇವೆ ಎಂಬುದಕ್ಕೆ ಇಂದಿನ ಫಲಿತಾಂಶವೇ ಸಾಕ್ಷಿಯಾಗಿದೆ ಎಂದರು.

ಇತರ ದೇಶಗಳಿಗೆ ಹೋಲಿಸಿದರೆ ಭಾರತದಲ್ಲಿನ ಸಾವಿನ ಪ್ರಮಾಣ ತುಂಬಾ ಕಡಿಮೆಯಾಗಿದೆ. ಅಷ್ಟೇ ಅಲ್ಲ ಬೇರೆ ದೇಶಗಳಿಗೆ ಹೋಲಿಕೆ ಮಾಡಿದಲ್ಲಿ ನಮ್ಮಲ್ಲಿ ಚೇತರಿಕೆಯ ಪ್ರಮಾಣವೂ ಹೆಚ್ಚಿದೆ ಎಂದು ಪ್ರಧಾನಿ ಹೇಳಿದರು. ಮುಂಬೈ, ಕೋಲ್ಕತಾ ಮತ್ತು ನೋಯ್ಡಾದಲ್ಲಿ ಅತ್ಯಾಧುನಿಕ ಪರೀಕ್ಷಾ ವ್ಯವಸ್ಥೆ ಕಲ್ಪಿಸಲಾಗಿದೆ ಎಂದರು.

ಕೋವಿಡ್ 19 ವಿರುದ್ಧದ ಹೋರಾಟದಲ್ಲಿ ಪಶ್ಚಿಮಬಂಗಾಳ, ಮಹಾರಾಷ್ಟ್ರ ಹಾಗೂ ಉತ್ತರಪ್ರದೇಶ ಭಾರೀ ಪ್ರಮಾಣದ ಲಾಭ ಪಡೆದಿರುವುದಾಗಿ ತಿಳಿಸಿದರು. ಅತ್ಯಾಧುನಿಕ ಪ್ರಯೋಗಾಲಯದಿಂದ ಪರೀಕ್ಷಾ ಸಾಮರ್ಥ್ಯ ಹೆಚ್ಚಳವಾಗಲಿದೆ. ಭವಿಷ್ಯದಲ್ಲಿ ಈ ಲ್ಯಾಬ್ ಅನ್ನು ಹೆಪಟೈಟೀಸ್ ಬಿ, ಡೆಂಗ್ಯು ಹಾಗೂ ಇತರ ಗಂಭೀರ ಸ್ವರೂಪದ ಖಾಯಿಲೆಗಳ ಪರೀಕ್ಷೆಗೆ ಬಳಸಿಕೊಳ್ಳಬಹುದಾಗಿದೆ ಎಂದು ಪ್ರಧಾನಿ ತಿಳಿಸಿದರು.

Advertisement

Udayavani is now on Telegram. Click here to join our channel and stay updated with the latest news.

Next