Advertisement

ದೆಹಲಿ ಕೆಂಪು ಕೋಟೆಯಲ್ಲಿ ಧ್ವಜಾರೋಹಣ ಮಾಡಿದ ಪ್ರಧಾನಿ ಮೋದಿ

08:04 AM Aug 15, 2021 | Team Udayavani |

ನವದೆಹಲಿ: ಸದ್ಯ ದೇಶವು ಕೋವಿಡ್ ಸಾಂಕ್ರಾಮಿಕದಿಂದ ಕಷ್ಟದಲ್ಲಿದೆ. ಇದರ ನಡುವೆಯೂ ದೇಶಾದ್ಯಂತ 75ನೇ ಸ್ವಾತಂತ್ರ್ಯ ದಿನಾಚರಣೆಯ ಸಂಭ್ರಮ ಮನೆ ಮಾಡಿದೆ. ಇದೇ ಹಿನ್ನೆಲೆ ದೆಹಲಿಯ ಐತಿಹಾಸಿಕ ಕೆಂಪು ಕೋಟೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಧ್ವಜಾರೋಹಣ ಮಾಡಿದ್ದಾರೆ.

Advertisement

ಮೋದಿಯವರು ದೇಶದ ಪ್ರಧಾನಿಯಾಗಿ ಕೆಂಪು ಕೋಟೆ ಮೇಲೆ ಸತತ 8ನೇ ಬಾರಿಗೆ ಧ್ವಜಾರೋಹಣ ಮಾಡಿದ್ದು, ದೇಶವನ್ನುದ್ದೇಶಿಸಿ ಮಾತನಾಡುತ್ತಿದ್ದಾರೆ. ಎರಡನೇ ಅವಧಿಯಲ್ಲಿ ಪ್ರಧಾನಿಯಾಗಿ ಅಧಿಕಾರ ಸ್ವೀಕಾರ ಮಾಡಿದ ಬಳಿಕ ನಮೋ ಮಾಡುತ್ತಿರುವ ಮೂರನೇ ಬಾರಿಯ ಸ್ವಾತಂತ್ರ್ಯೋತ್ಸವ ಭಾಷಣ ಇದಾಗಿದೆ.

ಧ್ವಜಾರೋಹಣಕ್ಕೂ ಮುನ್ನ ಪ್ರಧಾನಿ ಮೋದಿ ಅವರು ರಾಜ್‌ ಘಾಟ್ ಬಳಿ ತೆರಳಿ ಮಹಾತ್ಮ ಗಾಂಧಿಜಿ ಅವರ ಸ್ಮಾರಕಕ್ಕೆ ನಮಿಸಿದರು. ಬಳಿಕ ಕೆಂಪು ಕೋಟೆಗೆ ಆಗಮಿಸಿ ಗಾರ್ಡ್ ಆಫ್ ಆನರ್ ಸ್ವೀಕರಿಸಿದರು.

Advertisement

Udayavani is now on Telegram. Click here to join our channel and stay updated with the latest news.

Next