Advertisement

ಭಾರತವು ಠಾಕ್ರೆ- ಮೋದಿಗೆ ಸೇರಿದ್ದಲ್ಲ, ಭಾರತವು..: ಅಸಾದುದ್ದೀನ್ ಓವೈಸಿ

08:57 AM May 29, 2022 | Team Udayavani |

ಮುಂಬೈ: ಭಾರತವು ಠಾಕ್ರೆ, ಮೋದಿ, ಶಾ ಅವರದಲ್ಲ, ಭಾರತವು ದ್ರಾವಿಡರು ಮತ್ತು ಆದಿವಾಸಿಗಳಿಗೆ ಸೇರಿದೆ ಎಂದು ಎಐಎಂಐಎಂ ಮುಖ್ಯಸ್ಥ ಅಸಾದುದ್ದೀನ್ ಓವೈಸಿ ಹೇಳಿದ್ದಾರೆ.

Advertisement

ಮಹಾರಾಷ್ಟ್ರದ ಭಿವಂಡಿಯಲ್ಲಿ ಸಾರ್ವಜನಿಕ ಸಭೆಯನ್ನುದ್ದೇಶಿಸಿ ಮಾತನಾಡಿ, “ಭಾರತ ನನ್ನದಲ್ಲ, ಠಾಕ್ರೆಯವರದ್ದೂ ಅಲ್ಲ, ಮೋದಿ-ಶಾ ಅವರದ್ದೂ ಅಲ್ಲ. ಭಾರತ ಯಾರಿಗಾದರೂ ಸೇರಿದ್ದರೆ ಅದು ದ್ರಾವಿಡರು ಮತ್ತು ಆದಿವಾಸಿಗಳದ್ದು” ಎಂದು ಓವೈಸಿ ಹೇಳಿದ್ದಾರೆ.

ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ ಓವೈಸಿ, ಬಿಜೆಪಿ ಮತ್ತು ಆರ್‌ಎಸ್‌ಎಸ್ ಸದಾಕಾಲ ಮೊಘಲರ ಬಗ್ಗೆ ವಾಗ್ದಾಳಿ ನಡೆಸುತ್ತವೆ ಆದರೆ “ಆಫ್ರಿಕಾ, ಇರಾನ್, ಮಧ್ಯ ಏಷ್ಯಾ, ಪೂರ್ವ ಏಷ್ಯಾದಿಂದ ಜನರು ವಲಸೆ ಬಂದ ನಂತರ ಭಾರತ ರಚನೆಯಾಯಿತು” ಎಂದು ಹೇಳಿದರು.

ಇದನ್ನೂ ಓದಿ:ಮೋದಿ ಸರ್ಕಾರಕ್ಕೆ 8 ವರ್ಷ: ನಾಳೆಯಿಂದ ಬಿಜೆಪಿ ಜನಸಂಪರ್ಕ ಕಾರ್ಯಕ್ರಮ

ಹೆಚ್ಚಿದ ನಿರುದ್ಯೋಗ ಮತ್ತು ಹಣದುಬ್ಬರದ ಬಗ್ಗೆ ಸರ್ಕಾರದ ಮೇಲೆ ದಾಳಿ ಮಾಡಿದ ಓವೈಸಿ, ಈ ಸಮಸ್ಯೆಗಳಿಗೂ ಮೊಘಲರು ಜವಾಬ್ದಾರರೇ ಎಂದು ಕೇಳಿದರು. “ಭಾರತವನ್ನು ಮೊಘಲರು ಸ್ಥಾಪಿಸಿದ್ದಾರೆಯೇ? ಔರಂಗಜೇಬ್ ಹಣದುಬ್ಬರವನ್ನು ಹೆಚ್ಚಿಸಿದ್ದಾರೆಯೇ?” ಎಂದು ಓವೈಸಿ ಪ್ರಶ್ನಿಸಿದರು.

Advertisement

ಬಿಜೆಪಿ-ಆರ್‌ಎಸ್‌ಎಸ್ ಹೆಸರಿನಲ್ಲಿ ದೇಶದಲ್ಲಿ ಮುಸ್ಲಿಮರು ಭಯಭೀತರಾಗಿದ್ದಾರೆ ಮತ್ತು ಬಿಜೆಪಿ-ಆರ್‌ಎಸ್‌ಎಸ್ ಸುಳ್ಳುಗಳನ್ನು ಹರಡುತ್ತಿದೆ ಮತ್ತು ಇದು ಮುಂದುವರಿದರೆ ಜನರು ಪ್ರಜಾಪ್ರಭುತ್ವದ ಮೇಲಿನ ನಂಬಿಕೆಯನ್ನು ಕಳೆದುಕೊಳ್ಳುತ್ತಾರೆ ಎಂದು ಅಸಾದುದ್ದೀನ್ ಓವೈಸಿ ಹೇಳಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next