Advertisement

ಅಂತಿಮ ಏಕದಿನ ಪಂದ್ಯದಲ್ಲಿ ಟಾಸ್ ಸೋತ ಭಾರತ; ತಂಡದಲ್ಲಿ ಎರಡು ಬದಲಾವಣೆ

11:07 AM Dec 10, 2022 | Team Udayavani |

ಚತ್ತೋಗ್ರಾಮ್: ಮೊದಲೆರಡು ಪಂದ್ಯಗಳನ್ನು ಸೋತ ಅವಮಾನ ಒಂದೆಡೆಯಾದರೆ, ಪ್ರಮುಖ ಆಟಗಾರರು ಒಬ್ಬರಾದ ಮೇಲೆ ಒಬ್ಬರಂತೆ ಗಾಯಗೊಳ್ಳುತ್ತಿದ್ದಾರೆ. ಈ ಎಲ್ಲಾ ಒತ್ತಡಗಳ ನಡುವೆ ಭಾರತ ತಂಡವು ಬಾಂಗ್ಲಾದೇಶ ವಿರುದ್ಧದ ಮೂರನೇ ಮತ್ತು ಅಂತಿಮ ಏಕದಿನ ಪಂದ್ಯವಾಡಲು ತಯಾರಾಗಿದೆ.

Advertisement

ಚತ್ತೋಗ್ರಾಮ್ ನ ಜಹುರ್ ಅಹಮದ್ ಚೌಧರಿ ಸ್ಟೇಡಿಯಂನಲ್ಲಿ ಇದೇ ಮೊದಲ ಬಾರಿಗೆ ಭಾರತ ತಂಡ ಆಡುತ್ತಿದೆ. ಸರಣಿ ಸೋತರೂ, ಕೊನೆಯ ಪಂದ್ಯ ಗೆದ್ದು ಮರ್ಯಾದೆ ಉಳಿಸಿಕೊಳ್ಳಲು ರಾಹುಲ್ ಪಡೆ ಆಡುತ್ತಿದೆ.

ಟಾಸ್ ಗೆದ್ದ ಬಾಂಗ್ಲಾದೇಶವು ಮೊದಲು ಬೌಲಿಂಗ್ ಮಾಡಲು ನಿರ್ಧರಿಸಿದೆ.

ಇದನ್ನೂ ಓದಿ:ಯುವತಿ ಮನೆಗೆ ನುಗ್ಗಿ ಸುಮಾರು 100 ಮಂದಿಯಿಂದ ದಾಂಧಲೆ: ಪೋಷಕರ ಮುಂದೆಯೇ ಕಿಡ್ನ್ಯಾಪ್

ಇಂದಿನ ಪಂದ್ಯಕ್ಕೆ ಟೀಂ ಇಂಡಿಯಾದಲ್ಲಿ ಕೆಲವು ಬದಲಾವಣೆ ಮಾಡಲಾಗಿದೆ. ಗಾಯಗೊಂಡ ರೋಹಿತ್ ಶರ್ಮಾ, ದೀಪಕ್ ಚಾಹರ್ ಬದಲಿಗೆ ಇಶಾನ್ ಕಿಶನ್ ಮತ್ತು ಕುಲದೀಪ್ ಯಾದವ್ ತಂಡ ಸೇರಿದ್ದಾರೆ. ಬಾಂಗ್ಲಾ ತಂಡದಲ್ಲೂ ಎರಡು ಬದಲಾವಣೆ ಮಾಡಲಾಗಿದೆ.

Advertisement

ತಂಡಗಳು

ಭಾರತ: ಶಿಖರ್ ಧವನ್, ಇಶಾನ್ ಕಿಶನ್, ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್, ಕೆಎಲ್ ರಾಹುಲ್ (ನಾ/ವಿ.ಕೀ), ವಾಷಿಂಗ್ಟನ್ ಸುಂದರ್, ಅಕ್ಷರ್ ಪಟೇಲ್, ಶಾರ್ದೂಲ್ ಠಾಕೂರ್, ಕುಲದೀಪ್ ಯಾದವ್, ಮೊಹಮ್ಮದ್ ಸಿರಾಜ್, ಉಮ್ರಾನ್ ಮಲಿಕ್

ಬಾಂಗ್ಲಾದೇಶ: ಅನಾಮುಲ್ ಹಕ್, ಲಿಟ್ಟನ್ ದಾಸ್ (ನಾ), ಶಕೀಬ್ ಅಲ್ ಹಸನ್, ಯಾಸಿರ್ ಅಲಿ, ಮುಶ್ಫಿಕರ್ ರಹೀಮ್ (ವಿ.ಕೀ), ಮಹಮ್ಮದುಲ್ಲಾ, ಅಫೀಫ್ ಹೊಸೈನ್, ಮೆಹಿದಿ ಹಸನ್ ಮಿರಾಜ್, ಎಬಾಡೋತ್ ಹೊಸೈನ್, ಮುಸ್ತಾಫಿಜುರ್ ರೆಹಮಾನ್, ತಸ್ಕಿನ್ ಅಹ್ಮದ್.

Advertisement

Udayavani is now on Telegram. Click here to join our channel and stay updated with the latest news.

Next