Advertisement

ಕಾಶ್ಮೀರ ಸಮಸ್ಯೆ ನಿವಾರಣೆಗೆ ಭಾರತ ಸ್ಪಂದಿಸುತ್ತಿಲ್ಲ: ಇಮ್ರಾನ್‌ ಆರೋಪ

10:14 PM Feb 24, 2021 | Team Udayavani |

ಕೊಲಂಬೊ: “”2018ರಲ್ಲಿ ನಾನು ಪ್ರಧಾನಿಯಾಗಿ ನೇಮಕಗೊಂಡ ಬೆನ್ನಲ್ಲೇ, ಕಾಶ್ಮೀರ ಸಮಸ್ಯೆಯನ್ನು ಮಾತುಕತೆ ಮೂಲಕ ಬಗೆಹರಿಸಿಕೊಳ್ಳೋಣವೆಂದು ಭಾರತಕ್ಕೆ ಸಂದೇಶ ಕಳುಹಿಸಿದ್ದೆ. ಆದರೆ, ಭಾರತದಿಂದ ಯಾವುದೇ ಉತ್ತರ ಸಿಗಲಿಲ್ಲ” ಎಂದು ಪಾಕಿಸ್ತಾನದ ಪ್ರಧಾನಿ ಇಮ್ರಾನ್‌ ಖಾನ್‌ ಆರೋಪಿಸಿದ್ದಾರೆ.

Advertisement

ಶ್ರೀಲಂಕಾ ಪ್ರವಾಸದಲ್ಲಿರುವ ಅವರು, ಬುಧವಾರ ಕೊಲಂಬೋದಲ್ಲಿ ಆಯೋಜಿಸಲಾಗಿದ್ದ ವ್ಯಾಪಾರ ಮತ್ತು ಹೂಡಿಕೆದಾರರ ಸಮಾವೇಶದಲ್ಲಿ ಭಾಗಿಯಾಗಿ ಮಾತನಾಡಿ, “”ಭಾರತದೊಂದಿಗೆ ಪಾಕಿಸ್ತಾನ ಹೊಂದಿರುವ ಏಕೈಕ ಸಮಸ್ಯೆಯೆಂದರೆ ಅದು ಕಾಶ್ಮೀರ ವಿವಾದ ಮಾತ್ರ. ಆ ಸಮಸ್ಯೆಯನ್ನು ಕೇವಲ ಮಾತುಕತೆಯಿಂದ ನಾವು ಬಗೆಹರಿಸಿಕೊಳ್ಳಲು ಇಚ್ಛಿಸುತ್ತೇವೆ” ಎಂದಿದ್ದಾರೆ.

ಇದನ್ನೂ ಓದಿ:ನಾಟಕ ಪಾತ್ರಧಾರಿಯ ಮೈಮೇಲೆ ಚಾಮುಂಡಿ ದೇವಿಯ ಆಹ್ವಾಹನೆ? ವಿಡಿಯೋ ವೈರಲ್

Advertisement

Udayavani is now on Telegram. Click here to join our channel and stay updated with the latest news.

Next