Advertisement

ಕೋವಿಡ್ 19 ವೈರಸ್ ವಿರುದ್ಧ ಜಂಟಿ ಹೋರಾಟಕ್ಕೆ ಭಾರತ ಸಿದ್ಧ: ಇಸ್ರೇಲ್ ಗೆ ಮೋದಿ ಪ್ರತಿಕ್ರಿಯೆ

09:14 AM Apr 11, 2020 | Nagendra Trasi |

ನವದೆಹಲಿ: ಮಾರಣಾಂತಿಕ ಕೋವಿಡ್ 19 ವೈರಸ್ ತಡೆಗಟ್ಟುವ ನಿಟ್ಟಿನಲ್ಲಿ ಸ್ನೇಹಿ ರಾಷ್ಟ್ರಗಳಿಗೆ ಭಾರತ ನೆರವು ನೀಡಲು ಸಿದ್ಧ ಎಂದು ಪ್ರಧಾನಿ ನರೇಂದ್ರ ಮೋದಿ ಶುಕ್ರವಾರ ತಿಳಿಸಿದ್ದು, ಈವರೆಗೆ ಕೋವಿಡ್ 19 ಸೋಂಕಿಗೆ 95ಸಾವಿರಕ್ಕೂ ಅಧಿಕ ಮಂದಿ ಸಾವನ್ನಪ್ಪಿದ್ದು, ಈ ಸೋಂಕು ವಿರುದ್ಧ ಜಂಟಿಯಾಗಿ ಹೋರಾಡಬೇಕಾದ ಅಗತ್ಯವಿದೆ ಎಂದು ಕರೆ ನೀಡಿದ್ದಾರೆ.

Advertisement

“ನಾವು ಜಂಟಿಯಾಗಿ ವೈರಸ್ ವಿರುದ್ಧ ಹೋರಾಡಬೇಕಾಗಿದೆ. ನಮ್ಮ ಸ್ನೇಹಿತ ರಾಷ್ಟ್ರಗಳಿಗೆ ಎಷ್ಟು ನೆರವು ನೀಡಲು ಸಾಧ್ಯವೋ ಅಷ್ಟನ್ನು ನೀಡಲು ಭಾರತ ಸಿದ್ಧವಾಗಿದೆ. ಇಸ್ರೇಲ್ ಜನತೆಗೆ ಉತ್ತಮ ಆರೋಗ್ಯ ಕರುಣಿಸಲಿ ಎಂದು ದೇವರಲ್ಲಿ ಪ್ರಾರ್ಥಿಸುವುದಾಗಿ” ಪ್ರಧಾನಿ ಮೋದಿ ಟ್ವೀಟ್ ಮೂಲಕ ತಿಳಿಸಿದ್ದಾರೆ.

ಕೋವಿಡ್ 19 ಚಿಕಿತ್ಸೆ ನೀಡಲು ಉಪಯುಕ್ತವಾಗಿರುವ ಮಲೇರಿಯಾ ನಿರೋಧಕ ಲಸಿಕೆ ಹೈಡ್ರೋಕ್ಸೋಕ್ಲೋರೊಕ್ವಿನ್ ರಫ್ತು ಮಾಡಲು ಭಾರತ ತೆಗೆದುಕೊಂಡ ನಿರ್ಧಾರವನ್ನು ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಶ್ಲಾಘಿಸಿರುವುದಕ್ಕೆ ಪ್ರತಿಕ್ರಿಯೆಯಾಗಿ ಮೋದಿ ಈ ಟ್ವೀಟ್ ಮಾಡಿರುವುದಾಗಿ ವರದಿ ತಿಳಿಸಿದೆ.

ಪ್ರಧಾನಿ ನರೇಂದ್ರ ಮೋದಿ ಅವರು ಏಪ್ರಿಲ್ 3ರಂದು ಬೆಂಜಮಿನ್ ನೆತನ್ಯಾಹು ಜತೆ ದೂರವಾಣಿ ಸಂಭಾಷಣೆ ನಡೆಸಿದ್ದು, ಕೋವಿಡ್ 19 ವೈರಸ್ ಬಗ್ಗೆ ಚರ್ಚೆ ನಡೆಸಿದ್ದರು. ಕೋವಿಡ್ 19 ಸೋಂಕು ಹರಡದಂತೆ ತಡೆಗಟ್ಟುವ ನಿಟ್ಟಿನಲ್ಲಿ ಉಭಯ ನಾಯಕರು ಮಾತುಕತೆ ನಡೆಸಿದ್ದರು ಎಂದು ವರದಿ ಹೇಳಿದೆ.

Advertisement

Udayavani is now on Telegram. Click here to join our channel and stay updated with the latest news.

Next