Advertisement

ಭಾರತ ನಂ.1 ಆಗಬೇಕು: ಶಾ

02:18 AM Jun 30, 2019 | Team Udayavani |

ನವದೆಹಲಿ: ನೈಸರ್ಗಿಕ ವಿಪತ್ತು ನಿರ್ವಹಣೆಯಲ್ಲಿ ಭಾರತವನ್ನು ನಂಬರ್‌ ಒನ್‌ ಆಗಿಸಬೇಕು ಎಂದು ಗೃಹ ಸಚಿವ ಅಮಿತ್‌ ಶಾ ಕರೆ ನೀಡಿದ್ದಾರೆ.

Advertisement

ವಿಪತ್ತು ಸಂಭವಿಸಿದ ವೇಳೆ ರಕ್ಷಣಾ ಕಾರ್ಯಾಚರಣೆಯಲ್ಲಿ ತೊಡಗಿಸಿಕೊಂಡ ವಿವಿಧ ವಿಭಾಗಗಳಿಗೆ ಸ್ಪಷ್ಟ ನಿರ್ದೇಶನ ನೀಡುವ ವ್ಯವಸ್ಥೆಯನ್ನು ರೂಪಿಸಬೇಕು. ಇದರಲ್ಲಿ ಭಾರತ ಪರಿಣಿತಿ ಸಾಧಿಸಬೇಕಿದ್ದು, ವಿಶ್ವಕ್ಕೇ ಈ ನಿಟ್ಟಿನಲ್ಲಿ ಮೊದಲ ಸ್ಥಾನದಲ್ಲಿರಬೇಕು ಎಂದು ಶಾ ಹೇಳಿದ್ದಾರೆ. ಗೃಹ ಸಚಿವರಾಗಿ ಅಧಿಕಾರ ಸ್ವೀಕರಿಸಿದ ನಂತರ ಮೊದಲ ಸಾರ್ವಜನಿಕ ಸಭೆ ಉದ್ದೇಶಿಸಿ ಮಾತನಾಡಿದ ಅವರು, ಭಾರತ ವೈವಿಧ್ಯಮಯ ಭೌಗೋಳಿಕ ಪ್ರದೇಶ ಹೊಂದಿದೆ. ಹೀಗಾಗಿ ವಿಪತ್ತು ನಿರ್ವಹಣೆಯಲ್ಲಿ ಭಾರತ ಉತ್ತಮ ಅನುಭವ ಹೊಂದಿದೆ ಎಂದಿದ್ದಾರೆ. ರಾಜ್ಯ ವಿಪತ್ತು ನಿರ್ವ ಹಣಾ ಪಡೆಯ ಸಾಮರ್ಥ್ಯ ವರ್ಧನೆ ಕುರಿತು ಕೇಂದ್ರ ವಿಪತ್ತು ನಿರ್ವಹಣಾ ಪಡೆ ನಡೆಸಿದ ವಿಚಾರ ಸಂಕಿರಣದಲ್ಲಿ ಶಾ ಮಾತನಾಡಿದರು.

Advertisement

Udayavani is now on Telegram. Click here to join our channel and stay updated with the latest news.

Next