Advertisement

ಏಷ್ಯಾ ಕಪ್ ಗೆ ಭಾರತ ತಂಡ ಪ್ರಕಟ; ಬುಮ್ರಾ, ಹರ್ಷಲ್ ಪಟೇಲ್ ಗಾಯಾಳಾಗಿ ಹೊರಗೆ

10:08 PM Aug 08, 2022 | Team Udayavani |

ನವದೆಹಲಿ: ಏಷ್ಯಾ ಕಪ್ ಭಾರತ ತಂಡವನ್ನು ಸೋಮವಾರ ಪ್ರಕಟವಾಗಿದ್ದು ರೋಹಿತ್ ಶರ್ಮಾ ಮುನ್ನೆಡಸಲಿದ್ದು,ಹಿರಿಯ ವೇಗದ ಬೌಲರ್ ಜಸ್ಪ್ರೀತ್ ಬುಮ್ರಾ ಬೆನ್ನುನೋವಿನಿಂದ ಟಿ20 ಟೂರ್ನಿಯಿಂದ ಹೊರಗುಳಿಯಲಿದ್ದಾರೆ.

Advertisement

ಕೆ. ಎಲ್. ರಾಹುಲ್ (ಉಪನಾಯಕ), ವಿರಾಟ್ ಕೊಹ್ಲಿ, ಸೂರ್ಯಕುಮಾರ್ ಯಾದವ್, ದೀಪಕ್ ಹೂಡಾ, ಆರ್ ಪಂತ್ (ವಿಕೆಟ್ ಕೀಪರ್), ದಿನೇಶ್ ಕಾರ್ತಿಕ್ (ವಿಕೆಟ್ ಕೀಪರ್), ಹಾರ್ದಿಕ್ ಪಾಂಡ್ಯ, ಆರ್.  ಜಡೇಜಾ, ಆರ್. ಅಶ್ವಿನ್, ವೈ. ಚಾಹಲ್ , ಆರ್. ಬಿಷ್ಣೋಯ್, ಭುವನೇಶ್ವರ್ ಕುಮಾರ್, ಅರ್ಷದೀಪ್ ಸಿಂಗ್, ಅವೇಶ್ ಖಾನ್ ಅವರು ತಂಡದಲ್ಲಿ ಸ್ಥಾನ ಪಡೆದಿದ್ದಾರೆ.

ಹರ್ಷಲ್ ಪಟೇಲ್ ಗಾಯದ ಕಾರಣ ಆಯ್ಕೆಗೆ ಲಭ್ಯರಿರಲಿಲ್ಲ. ಮೂವರು ಆಟಗಾರಾರಾದ ಶ್ರೇಯಸ್ ಅಯ್ಯರ್, ಅಕ್ಷರ್ ಪಟೇಲ್ ಮತ್ತು ದೀಪಕ್ ಚಹಾರ್ ಅವರನ್ನು ಸ್ಟ್ಯಾಂಡ್‌ಬೈ ಎಂದು ಹೆಸರಿಸಲಾಗಿದೆ.

ಏಷ್ಯಾ ಕಪ್ ಪಂದ್ಯಾವಳಿಯ 15 ನೇ ಆವೃತ್ತಿಯು ಯುಎಇಯಲ್ಲಿ ಆಗಸ್ಟ್ 27 ರಿಂದ ಸೆಪ್ಟೆಂಬರ್ 11 ರವರೆಗೆ ನಡೆಯಲಿದ್ದು, ಆರು ತಂಡಗಳ ನಡುವೆ ನಡೆಯಲಿದೆ.

ಏಳು ಬಾರಿ ಟ್ರೋಫಿ ಗೆದ್ದಿರುವ ಹಾಲಿ ಚಾಂಪಿಯನ್ ಭಾರತವೂ ಅತ್ಯಂತ ಯಶಸ್ವಿ ತಂಡವಾಗಿದ್ದು, ಪಂದ್ಯಾವಳಿಯ ಹಿಂದಿನ ಆವೃತ್ತಿಯು ಏಕದಿನ ಮಾದರಿಯಲ್ಲಿ ನಡೆದಿದ್ದರೆ, ಈ ಆವೃತ್ತಿಯು ಟಿ 20 ಸ್ವರೂಪದಲ್ಲಿ ನಡೆಯುತ್ತಿದೆ.

Advertisement

ಆರು ತಂಡಗಳನ್ನು ಭಾರತ, ಪಾಕಿಸ್ತಾನ ಮತ್ತು ಎ ಗುಂಪಿನಲ್ಲಿ ಅರ್ಹತಾ ತಂಡದೊಂದಿಗೆ ಎರಡು ಗುಂಪುಗಳಾಗಿ ವಿಂಗಡಿಸಲಾಗಿದೆ ಮತ್ತು ಶ್ರೀಲಂಕಾ, ಬಾಂಗ್ಲಾದೇಶ ಮತ್ತು ಅಫ್ಘಾನಿಸ್ತಾನ ಬಿ ಗುಂಪಿನಲ್ಲಿ ಆಡಲಿವೆ. ಪ್ರತಿಯೊಂದು ತಂಡವು ಪ್ರತಿ ಗುಂಪಿನಿಂದ ಅಗ್ರ ಎರಡು ತಂಡಗಳು ಸೂಪರ್ 4 ಸುತ್ತಿಗೆ ಮುನ್ನಡೆಯುತ್ತವೆ. ಸೂಪರ್ 4ರಲ್ಲಿ ಅಗ್ರ 2 ತಂಡಗಳು ಫೈನಲ್‌ಗೆ ಅರ್ಹತೆ ಪಡೆಯಲಿವೆ ಎಂದು ಬಿಸಿಸಿಐ ತನ್ನ ಅಧಿಕೃತ ಹೇಳಿಕೆಯಲ್ಲಿ ತಿಳಿಸಿದೆ.

ಪ್ರೊಪೋಸಲ್‏ಗೆ ನಿರೀಕ್ಷಿಸುತ್ತಿದ್ದೀರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

Advertisement

Udayavani is now on Telegram. Click here to join our channel and stay updated with the latest news.

Next