Advertisement

ಮೂವರು ಹಿಂದು ಬಾಲಕಿಯರ ಅಪಹರಣ; ಭಾರತದಿಂದ ಪಾಕ್ ಅಧಿಕಾರಿಗಳಿಗೆ ಸಮನ್ಸ್

10:03 AM Jan 19, 2020 | Nagendra Trasi |

ನವದೆಹಲಿ:ಇತ್ತೀಚೆಗೆ ಪಾಕಿಸ್ತಾನದಲ್ಲಿ ಮೂವರು ಅಪ್ರಾಪ್ತ ಹಿಂದು ಬಾಲಕಿಯರನ್ನು ಅಪಹರಣ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಕೇಂದ್ರ ಗೃಹ ಸಚಿವಾಲಯ ಪಾಕಿಸ್ತಾನ ರಾಯಭಾರ ಕಚೇರಿಯ ಹಿರಿಯ ಅಧಿಕಾರಿಗೆ ಸಮನ್ಸ್ ನೀಡಿದ್ದು, ಈ ಬಗ್ಗೆ ಭಾರತ ತೀವ್ರವಾಗಿ ಪ್ರತಿಭಟಿಸಿದೆ ಎಂದು ವರದಿ ತಿಳಿಸಿದೆ.

Advertisement

ಜನವರಿ 14ರಂದು ಶಾಂತಿ ಮತ್ತು ಸರ್ಮಿ ಮೇಘವಾಲ್ ಎಂಬ ಇಬ್ಬರು ಅಪ್ರಾಪ್ತ ಹಿಂದು ಬಾಲಕಿಯನ್ನು ಹಾಗೂ ಜನವರಿ 15ರಂದು ಮೇಹಕ್ ಎಂಬ ಬಾಲಕಿಯನ್ನು ಅಪಹರಿಸಿದ್ದು, ಈ ಹಿನ್ನೆಲೆಯಲ್ಲಿ ಪಾಕಿಸ್ತಾನ ಅಧಿಕಾರಿಗಳು ಹಾಜರಾಗುವಂತೆ ಸಮನ್ಸ್ ನೀಡಲಾಗಿತ್ತು ಎಂದು ಮೂಲಗಳು ತಿಳಿಸಿವೆ.

ಈ ಘಟನೆಗೆ ಸಂಬಂಧಿಸಿದಂತೆ ಭಾರತ ತೀವ್ರ ಕಳವಳ ವ್ಯಕ್ತಪಡಿಸಿರುವುದಾಗಿ ಪಾಕಿಸ್ತಾನಿ ಅಧಿಕಾರಿಗಳು ಪಾಕ್ ವಿದೇಶಾಂಗ ಇಲಾಖೆಗೆ ಮಾಹಿತಿ ನೀಡಿರುವುದಾಗಿ ವರದಿ ತಿಳಿಸಿದೆ.

ಜಮ್ಮು-ಕಾಶ್ಮೀರ ವಿಚಾರದಲ್ಲಿ ಇತ್ತೀಚೆಗೆ ಘರ್ಷಣೆ ನಡೆಯುತ್ತಿರುವ ನಡುವೆಯೇ ನಡೆದಿರುವ ಈ ಬೆಳವಣಿಗೆಯಿಂದ ಉಭಯ ದೇಶಗಳ ದ್ವಿಪಕ್ಷೀಯ ಸಂಬಂಧದ ಮೇಲೆ ಪರಿಣಾಮ ಬೀರುವಂತಾಗಿದೆ ಎಂದು ವರದಿ ವಿವರಿಸಿದೆ.

Advertisement

Udayavani is now on Telegram. Click here to join our channel and stay updated with the latest news.

Next