Advertisement

India Canada Issue: ಕೆನಡಾದ ರಾಜತಾಂತ್ರಿಕರನ್ನು ವಾಪಸ್ ಕರೆಸಿಕೊಳ್ಳಲು ಗಡುವು ನೀಡಿದ ಭಾರತ

01:31 PM Oct 03, 2023 | Team Udayavani |

ನವದೆಹಲಿ: ಖಲಿಸ್ತಾನಿ ಭಯೋತ್ಪಾದಕ ಹರ್ದೀಪ್ ಸಿಂಗ್ ನಿಜ್ಜಾರ್ ಹತ್ಯೆಗೆ ಸಂಬಂಧಿಸಿದಂತೆ ಭಾರತ ಮತ್ತು ಕೆನಡಾ ಉಭಯ ರಾಷ್ಟ್ರಗಳ ನಡುವೆ ಉದ್ವಿಗ್ನತೆ ಹೆಚ್ಚಿರುವ ಮಧ್ಯೆ ಭಾರತದಿಂದ ತನ್ನ 40 ರಾಜತಾಂತ್ರಿಕರನ್ನು ವಾಪಸ್ ಕರೆಸಿಕೊಳ್ಳಿ ಎಂದು ಕೆನಡಾಕ್ಕೆ ಭಾರತ ಹೇಳಿದೆ.

Advertisement

ಖಲಿಸ್ತಾನಿ ಭಯೋತ್ಪಾದಕನ ಹತ್ಯೆ ಹಿಂದೆ ಭಾರತ ಸರ್ಕಾರದ ಏಜೆಂಟ್​​ಗಳ ಕೈವಾಡ ಇದೆ ಎಂದು ಕೆನಡಾ ಆರೋಪಿಸಿದ ಬಳಿಕ ಉಂಟಾದ ರಾಜತಾಂತ್ರಿಕ ಬಿಕ್ಕಟ್ಟು ಸದ್ಯ ತಣ್ಣಗಾಗುವ ಲಕ್ಷಣಗಳು ಕಾಣುತ್ತಿಲ್ಲ ಕೆನಡಾ ನೀಡಿರುವ ಹೇಳಿಕೆಗೆ ಸರಿಯಾಗಿ ಪ್ರತಿಕ್ರಿಯೆ ನೀಡಿದ ಭಾರತ ಅಕ್ಟೋಬರ್ 10 ರೊಳಗೆ ಭಾರತದಲ್ಲಿರುವ 40 ಕೆನಡಾದ ರಾಜತಾಂತ್ರಿಕರನ್ನು ವಾಪಸ್ ಕಳುಹಿಸಬೇಕು ಎಂದು ಒಟ್ಟಾವಾಗೆ ತಿಳಿಸಿದೆ. ಈ ಹೇಳಿಕೆಯ ಬೆನ್ನಲ್ಲೇ ಕೆನಡಾ ಭಾರತ ತಮ್ಮ ಮೇಲೆ ಬೆದರಿಕೆ ಹಾಕುತ್ತಿದೆ ಎಂದು ಆರೋಪಿಸಿದೆ.

ಕೆನಡಾವು ಭಾರತದಲ್ಲಿ 62 ರಾಜತಾಂತ್ರಿಕರನ್ನು ಹೊಂದಿದ್ದು ಮತ್ತು ಈ ಮೊದಲು ಭಾರತವು ಒಟ್ಟು 41 ರಷ್ಟು ಕಡಿಮೆಗೊಳಿಸಬೇಕೆಂದು ಹೇಳಿದೆ ಎಂದು ಪತ್ರಿಕೆ ಹೇಳಿದೆ.

ಕೆನಡಾದ ನೆಲದಲ್ಲಿ ಖಲಿಸ್ತಾನಿ ಪ್ರತ್ಯೇಕತಾವಾದಿಯ ಹತ್ಯೆಯ ಕುರಿತು ಭಾರತ ವಿರುದ್ಧ ಒಟ್ಟಾವಾ ಆರೋಪಿಸಿದ ನಂತರ ಉಭಯ ದೇಶಗಳ ನಡುವಿನ ಸಂಬಂಧಗಳು ಸಾರ್ವಕಾಲಿಕವಾಗಿ ಕೆಳಮಟ್ಟಕ್ಕೆ ಇಳಿದಿದ್ದರಿಂದ ಕೆನಡಾದಲ್ಲಿ ತನ್ನ ರಾಜತಾಂತ್ರಿಕ ಉಪಸ್ಥಿತಿಯನ್ನು ಕಡಿಮೆಗೊಳಿಸುವಂತೆ ಭಾರತವು ಈ ಹಿಂದೆ ಕೆನಡಾವನ್ನು ಕೇಳಿಕೊಂಡಿತ್ತು.

ಭಾರತ ಮತ್ತು ಕೆನಡಾದಲ್ಲಿ ನೇಮಕಗೊಂಡಿರುವ ರಾಜತಾಂತ್ರಿಕರ ಸಂಖ್ಯೆಯಲ್ಲಿ ‘ಸಮಾನತೆ’ ಬಯಸುವುದಾಗಿ ಭಾರತ ಸರ್ಕಾರ ಈ ಹಿಂದೆ ಹೇಳಿತ್ತು. ಒಟ್ಟಾವಾದಲ್ಲಿ ಭಾರತಕ್ಕೆ ಹೋಲಿಸಿದರೆ ಕೆನಡಾವು ದೆಹಲಿಯಲ್ಲಿರುವ ತನ್ನ ಹೈಕಮಿಷನ್‌ನಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ರಾಜತಾಂತ್ರಿಕರನ್ನು ಹೊಂದಿದೆ ಎನ್ನಲಾಗಿದೆ.

Advertisement

ಕಳೆದ ವಾರ ವಾಷಿಂಗ್ಟನ್ ಡಿಸಿಯಲ್ಲಿ ಪತ್ರಿಕಾಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ವಿದೇಶಾಂಗ ವ್ಯವಹಾರಗಳ ಸಚಿವ ಡಾ ಎಸ್ ಜೈಶಂಕರ್ , ಹರ್ದೀಪ್ ಸಿಂಗ್ ನಿಜ್ಜರ್ ಹತ್ಯೆಯು “ನಮ್ಮ ನೀತಿಗೆ ಅನುಗುಣವಾಗಿಲ್ಲ” ಎಂದು ಹೇಳಿದ್ದಾರೆ. ಅಲ್ಲದೆ ಭಾರತದಲ್ಲಿ ಸ್ವತಂತ್ರ ರಾಜ್ಯವನ್ನು ಬಯಸುತ್ತಿರುವ ಖಲಿಸ್ತಾನಿ ಪರ ಅಂಶಗಳಲ್ಲಿ ಕೆನಡಾ ತೊಡಗಿಸಿಕೊಂಡಿದೆ ಎಂದು ಅವರು ಆರೋಪಿಸಿದರು. ಇದಲ್ಲದೆ, ನಿಜ್ಜರ್ ಹತ್ಯೆಯಲ್ಲಿ ಭಾರತವು ಭಾಗಿಯಾಗಿದೆ ಎಂದು ಟ್ರೂಡೊ ಆರೋಪಿಸಿದ ನಂತರ ಭಾರತವು ಕೆನಡಾಕ್ಕೆ ತನ್ನ ವೀಸಾ ಸೇವೆಗಳನ್ನು ಸ್ಥಗಿತಗೊಳಿಸಿದೆ. ಕೆನಡಾದಲ್ಲಿ “ಬೆಳೆಯುತ್ತಿರುವ ಭಾರತ-ವಿರೋಧಿ ಚಟುವಟಿಕೆಗಳು ಮತ್ತು ರಾಜಕೀಯವಾಗಿ ಮನ್ನಣೆ ಪಡೆದ ದ್ವೇಷದ ಅಪರಾಧಗಳು ಮತ್ತು ಕ್ರಿಮಿನಲ್ ಹಿಂಸಾಚಾರ” ದ ಹಿನ್ನೆಲೆಯಲ್ಲಿ ಭಾರತವು ತನ್ನ ನಾಗರಿಕರಿಗೆ ಮತ್ತು ಕೆನಡಾಕ್ಕೆ ಪ್ರಯಾಣಿಸುವವರಿಗೆ ಹೆಚ್ಚಿನ ಎಚ್ಚರಿಕೆಯನ್ನು ನೀಡುವಂತೆ ಸಲಹೆಯನ್ನು ನೀಡಿದೆ.

ಇದನ್ನೂ ಓದಿ: Child Marriage: ಬಾಲ್ಯವಿವಾಹದ ವಿರುದ್ಧ ಕಾರ್ಯಾಚರಣೆ… 800 ಕ್ಕೂ ಹೆಚ್ಚು ಮಂದಿ ಬಂಧನ

Advertisement

Udayavani is now on Telegram. Click here to join our channel and stay updated with the latest news.

Next