Advertisement

ಭಾರತದಲ್ಲಿ ಜುಲೈವರೆಗೂ ಕೋವಿಡ್ 19 ಲಸಿಕೆ ಕೊರತೆ ಎದುರಿಸಬೇಕಾಗುತ್ತೆ: ಸೀರಂ

01:04 PM May 03, 2021 | Team Udayavani |

ನವದೆಹಲಿ: ಭಾರತ ಮಾರಣಾಂತಿಕ ಕೋವಿಡ್ ಎರಡನೇ ಅಲೆಯಿಂದ ತತ್ತರಿಸಿಹೋಗಿದ್ದು, ಆಕ್ಸಿಜನ್, ಬೆಡ್ ಗಳ ಕೊರತೆ ಎದುರಿಸುತ್ತಿರುವ ನಡುವೆಯೇ ಮತ್ತೊಂದು ಕಳವಳಕಾರಿ ಸುದ್ದಿಯೊಂದು ಹೊರಬಿದ್ದಿದೆ. ಜುಲೈವರೆಗೆ ಭಾರತದಲ್ಲಿ ಲಸಿಕೆ ಕೊರತೆಯನ್ನು ಎದುರಿಸಬೇಕಾಗಲಿದೆ ಎಂದು ಸೀರಂ ಇನ್ಸ್ ಟಿಟ್ಯೂಟ್ (ಎಸ್ ಐಐ) ಮುಖ್ಯಸ್ಥ ಆದರ್ ಪೂನವಾಲ್ಲಾ ತಿಳಿಸಿದ್ದಾರೆ.

Advertisement

ಇದನ್ನೂ ಓದಿ:ಇದು ಸಾವೋ ಅಥವಾ ಕೊಲೆಯೋ : ಚಾಮರಾಜನಗರ ಘಟನೆ ಬಗ್ಗೆ ರಾಹುಲ್ ಗಾಂಧಿ ಆಕ್ರೋಶ

ದೇಶದಲ್ಲಿ ಕಳೆದ ಕೆಲವು ದಿನಗಳಿಂದ 3ಲಕ್ಷಕ್ಕೂ ಅಧಿಕ ಕೋವಿಡ್ ಪ್ರಕರಣಗಳು ಪತ್ತೆಯಾಗುತ್ತಿದೆ. ಭಾರತದ ಸದ್ಯದ ಕೋವಿಡ್ ಪರಿಸ್ಥಿತಿ ಜಗತ್ತಿನ ಇತರ ದೇಶಗಳಿಗಿಂತ ತುಂಬಾ ಗಂಭೀರವಾಗಿದೆ ಎಂದು ವರದಿ ತಿಳಿಸಿದೆ.

ಕೋವಿಡ್ ಪ್ರಕರಣ ಹೆಚ್ಚಳವಾಗುತ್ತಿರುವ ನಡುವೆ ಕೋವಿಡ್ ಲಸಿಕೆ ಸರಬರಾಜು ಕುರಿತು ಪ್ರಶ್ನೆಗಳು ಉದ್ಭವವಾಗುತ್ತಿರುವ ಸಂದರ್ಭದಲ್ಲಿಯೇ ಸೀರಂ ಮುಖ್ಯಸ್ಥ ಆದರ್ ಪೂನವಾಲ್ಲಾ, ಕೋವಿಡ್ 19 ಲಸಿಕೆಯ ಉತ್ಪಾದನೆಯನ್ನು ಜುಲೈ ತಿಂಗಳಿನಿಂದ ಹೆಚ್ಚಳ ಮಾಡುವ ನಿರೀಕ್ಷೆ ಇದೆ ಎಂದು ತಿಳಿಸಿದ್ದಾರೆ.

ಮೇ 1ರಂದು ದೇಶಾದ್ಯಂತ ಮೂರನೇ ಹಂತದ ಲಸಿಕೆ ಅಭಿಯಾನ ಆರಂಭವಾದ ಎರಡು ದಿನಗಳ ನಂತರ ಪೂನವಾಲ್ಲಾ ಈ ಹೇಳಿಕೆಯನ್ನು ನೀಡಿದ್ದಾರೆ. ಮೂರನೇ ಹಂತದಲ್ಲಿ 18ವರ್ಷಕ್ಕಿಂತ ಮೇಲ್ಪಟ್ಟವರು ಲಸಿಕೆ ಪಡೆಯಬಹುದು ಎಂದು ಕೇಂದ್ರ ಸರ್ಕಾರ ತಿಳಿಸಿತ್ತು. ಆದರೂ ಹಲವು ರಾಜ್ಯಗಳಲ್ಲಿ ಲಸಿಕೆ ಕೊರತೆಯಿಂದ 3ನೇ ಹಂತದ ಲಸಿಕೆ ಅಭಿಯಾನ ಆರಂಭಿಸಿಲ್ಲ.

Advertisement
Advertisement

Udayavani is now on Telegram. Click here to join our channel and stay updated with the latest news.

Next