Advertisement
ಇವರಲ್ಲಿ ವಿಜಯ್ ಶಂಕರ್ ಕೂಡಲೇ ಆಸ್ಟ್ರೇಲಿಯಕ್ಕೆ ತೆರಳಲಿದ್ದು, ಉಳಿದೆರಡು ಏಕದಿನ ಪಂದ್ಯಗಳ ಆಯ್ಕೆಗೆ ಲಭ್ಯರಾಗಲಿದ್ದಾರೆ. ಆದರೆ ಶುಭಮನ್ ಗಿಲ್ ನ್ಯೂಜಿಲ್ಯಾಂಡ್ ಪ್ರವಾಸದ ವೇಳೆಯಷ್ಟೇ ಭಾರತ ತಂಡವನ್ನು ಕೂಡಿಕೊಳ್ಳಲಿದ್ದಾರೆ. ನ್ಯೂಜಿಲ್ಯಾಂಡ್ನಲ್ಲಿ ಭಾರತ 5 ಏಕದಿನ ಹಾಗೂ 3 ಟಿ20 ಪಂದ್ಯಗಳನ್ನು ಆಡಲಿದೆ.
ತಮಿಳುನಾಡಿನ 27ರ ಹರೆಯದ ಆಲ್ರೌಂಡರ್ ವಿಜಯ್ ಶಂಕರ್ ಉತ್ತಮ ಫಿನಿಶರ್ ಆಗಿ ಗುರುತಿಸಲ್ಪಟ್ಟಿದ್ದಾರೆ. ಭಾರತ “ಎ’ ತಂಡದೊಂದಿಗೆ ನ್ಯೂಜಿಲ್ಯಾಂಡ್ ಪ್ರವಾಸ ಕೈಗೊಂಡದ್ದು ತನಗೆ ಲಾಭವಾಗಿ ಪರಿಣಮಿಸಲಿದೆ ಎಂಬುದು ಅವರ ಅಭಿಪ್ರಾಯ. ತನ್ನ ಯಶಸ್ಸಿನಲ್ಲಿ ಕೋಚ್ ರಾಹುಲ್ ದ್ರಾವಿಡ್ ಅವರ ಪಾಲು ಮಹತ್ವದ್ದಾಗಿದ್ದು, ನ್ಯೂಜಿಲ್ಯಾಂಡ್ ಪ್ರವಾಸದ ವೇಳೆ ತನ್ನನ್ನು 5ನೇ ಕ್ರಮಾಂಕದಲ್ಲಿ ಬ್ಯಾಟಿಂಗಿಗೆ ಇಳಿಸುವ ಮೂಲಕ ಆತ್ಮವಿಶ್ವಾಸ ತುಂಬಿದರು ಎಂದು ಪ್ರತಿಕ್ರಿಯಿಸಿದ್ದಾರೆ.
Related Articles
Advertisement
ಹಾರ್ದಿಕ್ ಪಾಂಡ್ಯ ಅವರನ್ನು ಆಸ್ಟ್ರೇಲಿಯದ ಟೆಸ್ಟ್ ಸರಣಿ ನಡುವೆ ತಂಡಕ್ಕೆ ಸೇರಿಸಿಕೊಳ್ಳಲಾಗಿತ್ತು. ಆದರೆ ಯಾವುದೇ ಪಂದ್ಯದಲ್ಲಿ ಆಡುವ ಅವಕಾಶ ಲಭಿಸಿರಲಿಲ್ಲ. ರಾಹುಲ್ ಟೆಸ್ಟ್ನಲ್ಲಿ ಲಭಿಸಿದ ಅವಕಾಶಗಳನ್ನು ಬಳಸಿಕೊಳ್ಳಲು ಸಂಪೂರ್ಣ ವಿಫಲರಾಗಿದ್ದರು.