Advertisement

ಕ್ರಿಕೆಟ್‌ ಮೈದಾನಕ್ಕೆ ನುಗ್ಗಿದ ನಾಲ್ವರ ಸೆರೆ

03:01 PM Mar 15, 2022 | Team Udayavani |

ಬೆಂಗಳೂರು: ನಗರದ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಭಾರತ-ಶ್ರೀಲಂಕಾ ಟೆಸ್ಟ್‌ ಕ್ರಿಕೆಟ್‌ ಪಂದ್ಯಾವಳಿ ವೇಳೆ ವಿರಾಮ ನೀಡಿದ್ದ ಸಂದರ್ಭದಲ್ಲಿ ಮೈದಾನದೊಳಗೆ ನುಗ್ಗಿ ವಿರಾಟ್‌ ಕೊಹ್ಲಿ ಜತೆ ಸೆಲ್ಫಿ ತೆಗೆದುಕೊಳ್ಳಲು ಯತ್ನಿಸಿದ ಇಬ್ಬರು ಕಾನೂನು ಸಂಘರ್ಷಕ್ಕೊಳಗಾದವರು ಸೇರಿ ನಾಲ್ವರನ್ನು ಕಬ್ಬನ್‌ ಪಾರ್ಕ್‌ ಪೊಲೀಸರು ಬಂಧಿಸಿದ್ದಾರೆ.

Advertisement

ಭಾನುವಾರ ನಡೆಯುತ್ತಿದ್ದ ಪಂದ್ಯಾವಳಿ ವೇಳೆ ಮೆಡಿಕಲ್‌ ಬ್ರೇಕ್‌ ನೀಡಲಾಗಿತ್ತು. ಈ ಸಂದರ್ಭದಲ್ಲಿ ಯುವಕರು ಪೊಲೀಸರ ಕಣ್ಣು ತಪ್ಪಿಸಿ ಏಕಾಏಕಿ ಮೈದಾನದ ಒಳಗೆ ನುಗ್ಗಿದ್ದಾರೆ. ಅದನ್ನು ಗಮನಿಸಿದ ಪೊಲೀಸರು ಕೂಡಲೇ ನಾಲ್ವರನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ಈ ನಾಲ್ವರು ವಿದ್ಯಾರ್ಥಿಗಳಾಗಿದ್ದಾರೆ ಎಂದು ಹೇಳಲಾಗಿದೆ.

ಆರೋಪಿಗಳ ವಿರುದ್ಧ ಮೈದಾನಕ್ಕೆ ಅತಿಕ್ರಮ ಪ್ರವೇಶ, ಕೊರೊನಾ ನಿಯಮ ಉಲ್ಲಂಘನೆ ಹಾಗೂ ಕ್ರಿಮಿನಲ್‌ ಪ್ರಕರಣ ದಾಖಲಿಸಲಾಗಿದೆ ಎಂದು ಪೊಲೀಸರು ಹೇಳಿದರು.

Advertisement

Udayavani is now on Telegram. Click here to join our channel and stay updated with the latest news.

Next