Advertisement

Rajnath Singh; ಪಾಕಿಸ್ತಾನಕ್ಕೆ ನುಗ್ಗಿ ಹೊಡೆಯುತ್ತೇವೆ…: ಎಚ್ಚರಿಕೆ ನೀಡಿದ ರಾಜನಾಥ್ ಸಿಂಗ್

08:18 AM Apr 06, 2024 | Team Udayavani |

ಹೊಸದಿಲ್ಲಿ: ಉಗ್ರರು ಪಾಕಿಸ್ತಾನಕ್ಕೆ ಕಾಲ್ಕಿತ್ತರೆ ನಾವು ಅಲ್ಲಿ ನುಗ್ಗಿ ಹೊಡೆಯುತ್ತೇವೆ ಎಂದು ರಕ್ಷಣಾ ಸಚಿವ ರಾಜನಾಥ್ ಸಿಂಗ್ ಹೇಳಿದ್ದಾರೆ. ಭಯೋತ್ಪಾದಕರ ವಿರುದ್ಧದ ಭಾರತದ ನಿಲುವನ್ನು ಸಿಂಗ್ ಪುನರುಚ್ಚರಿಸಿದ್ದಾರೆ.

Advertisement

ಪಾಕ್‌ ನೆಲಕ್ಕೆ ನುಗ್ಗಿ 20 ಮಂದಿ ಉಗ್ರರನ್ನು ಭಾರತ ಕೊಂದಿದೆ ಎಂಬ ಆರೋಪಗಳ ನಡುವೆಯೇ ಈ ಅವರು ಈ ಪ್ರತಿಕ್ರಿಯೆ ನೀಡಿದ್ದಾರೆ. ಸಂದರ್ಶನವೊಂದ ರಲ್ಲಿ ಮಾತನಾಡಿದ ಅವರು, ಭಾರತವನ್ನು ಪದೇಪದೆ ಗುರಿಯಾಗಿಸಿಕೊಂಡು ದಾಳಿ ನಡೆಸಿದರೆ ಸುಮ್ಮನೆ ಇರಲು ಸಾಧ್ಯವಾಗದು ಎಂದು ಗುಡುಗಿದ್ದಾರೆ.

“ನಾವು 20 ಉಗ್ರರನ್ನು ಕೊಂದಿದ್ದೇವೆ ಎಂದು ಹೇಳಿದ್ದೀರಾ? ಪಾಕಿಸ್ತಾನದ ಯಾವುದೇ ಭಯೋತ್ಪಾದಕರು ಭಾರತಕ್ಕೆ ತೊಂದರೆ ನೀಡಲು ಪ್ರಯತ್ನಿಸಿದರೆ ಅಥವಾ ಇಲ್ಲಿ ಭಯೋತ್ಪಾದಕ ಕೃತ್ಯಗಳನ್ನು ಎಸಗಿದರೆ ನಾವು ತಕ್ಕ ಉತ್ತರ ನೀಡುತ್ತೇವೆ. ಅವನು ಪಾಕಿಸ್ತಾನಕ್ಕೆ ಓಡಿಹೋದರೆ, ನಾವು ಅಲ್ಲಿಗೆ ಹೋಗಿ ಅವನನ್ನು ಕೊಲ್ಲುತ್ತೇವೆ” ಎಂದು ರಾಜನಾಥ್ ಸಿಂಗ್ ಅವರು ಖಾಸಗಿ ಮಾಧ್ಯಮದೊಂದಿಗೆ ಮಾತನಾಡುತ್ತಾ ಹೇಳಿದರು.

ಭಾರತದಲ್ಲಿ ಶಾಂತಿ ಕದಡುವವರ ವಿರುದ್ಧ ಭಾರತ ಕಠಿಣ ಕ್ರಮ ಕೈಗೊಳ್ಳುತ್ತದೆ ಎಂದ ಸಿಂಗ್, ನೆರೆಯ ರಾಷ್ಟ್ರಗಳೊಂದಿಗೆ ಶಾಂತಿಯುತ ಸಂಬಂಧಕ್ಕಾಗಿ ಭಾರತದ ಬಯಕೆಯನ್ನು ಅವರು ಪುನರುಚ್ಚರಿಸಿದರು. ಆದರೆ ದೇಶದ ಭದ್ರತೆಗೆ ಯಾವುದೇ ಬೆದರಿಕೆಗೆ ದೃಢವಾಗಿ ಪ್ರತಿಕ್ರಿಯಿಸಲು ದೇಶವು ಸಿದ್ಧವಾಗಿದೆ ಎಂದು ಒತ್ತಿ ಹೇಳಿದರು.

Advertisement

Udayavani is now on Telegram. Click here to join our channel and stay updated with the latest news.

Next