Advertisement

ಚೀನಾ ಚಿತಾವಣೆಗಳಿಗೆ ಭಾರತ ಬಗ್ಗುವುದಿಲ್ಲ : ಬಿಪಿನ್‌ ರಾವತ್

09:46 PM Apr 15, 2021 | Team Udayavani |

ನವದೆಹಲಿ: ಪೂರ್ವ ಲಡಾಖ್‌ನಲ್ಲಿ ಗಡಿರೇಖೆಯಲ್ಲಿ ಬದಲಾವಣೆ ಮಾಡಬೇಕು ಎಂಬ ಚೀನಾದ ಚಿತಾವಣೆಗಳಿಗೆ ಭಾರತ ಬಗ್ಗುವುದೇ ಇಲ್ಲ ಎಂದು ರಕ್ಷಣಾ ಪಡೆಗಳ ಮುಖ್ಯಸ್ಥ ಜ.ಬಿಪಿನ್‌ ರಾವತ್‌ ಹೇಳಿದ್ದಾರೆ.

Advertisement

“ರೈಸಿನಾ ಡೈಲಾಗ್‌’ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಜ.ರಾವತ್‌, ತಾಂತ್ರಿಕವಾಗಿ ಅತ್ಯಂತ ಶಕ್ತಿಶಾಲಿಯಾಗಿರುವ ಸೇನೆಯನ್ನು ಹೊಂದಿದೆ ಎಂಬ ಭಾವನೆಯಿಂದ ಚೀನಾವು ಕೆಲವು ದೇಶಗಳ ಮೇಲೆ ಒತ್ತಡ ಹೇರಿ, ಪೂರ್ವ ಲಡಾಖ್‌ ಭಾಗದಲ್ಲಿ ಗಡಿಯಲ್ಲಿ ಬದಲು ಮಾಡಬಹುದು ಎಂಬ ಇರಾದೆ ಹೊಂದಿತ್ತು. ಭಾರತ ದೃಢ ನಿಲುವು ಹೊಂದಿದ್ದರಿಂದ ಆ ದೇಶದ ಚಿತಾವಣೆ ತಡೆಯಲಾಯಿತು ಎಂದು ಹೇಳಿದ್ದಾರೆ.

ಅಂತಾರಾಷ್ಟ್ರೀಯ ಸಮುದಾಯದಿಂದಲೂ ನಮಗೆ ಅನುಕೂಲಕರ ಅಭಿಪ್ರಾಯ ವ್ಯಕ್ತವಾಯಿ ತು. ಅವರ ಅಭಿಪ್ರಾಯ ಕೂಡ ಗಡಿಯಲ್ಲಿ ಯಥಾಸ್ಥಿತಿ ಕಾಯ್ದುಕೊಳ್ಳಲು ನೆರ ವಾ ಯಿತು ಎಂದು ಜ.ಬಿಪಿನ್‌ ರಾವತ್‌ ಹೇಳಿದ್ದಾರೆ.

ಇದನ್ನೂ ಓದಿ :ಮುಂಬೈ : ಇಂದಿನಿಂದ ಮತ್ತೆ ಮರುಪ್ರಸಾರವಾಗುತ್ತಿದೆ ‘ರಾಮಾಯಣ’ ಧಾರಾವಾಹಿ 

Advertisement

Udayavani is now on Telegram. Click here to join our channel and stay updated with the latest news.

Next