Advertisement

ಭಾರತ ಯಾರಿಗೂ ಒಂದು ಇಂಚು ಭೂಮಿ ಬಿಟ್ಟುಕೊಡುವುದಿಲ್ಲ: ರಾಜನಾಥ್ ಸಿಂಗ್

10:41 PM Jun 25, 2022 | Team Udayavani |

ನವದೆಹಲಿ: ಭಾರತವು ತನ್ನ ಒಂದು ಇಂಚು ಭೂಮಿಯನ್ನು ಚೀನಾಕ್ಕೆ ಬಿಟ್ಟುಕೊಡುವುದಿಲ್ಲ ಎಂದು ರಕ್ಷಣಾ ಸಚಿವ ರಾಜನಾಥ್ ಸಿಂಗ್ ಶನಿವಾರ ಹೇಳಿದ್ದಾರೆ ಮತ್ತು ಉಭಯ ದೇಶಗಳ ನಡುವಿನ ಪೂರ್ವ ಲಡಾಖ್ ಗಡಿ ಬಿಕ್ಕಟ್ಟಿಗೆ ಸಂಬಂಧಿಸಿದ ಉಳಿದ ಸಮಸ್ಯೆಗಳನ್ನು ಮಾತುಕತೆಯ ಮೂಲಕ ಪರಿಹರಿಸಲಾಗುವುದು ಎಂದು ಆಶಿಸಿದ್ದಾರೆ.

Advertisement

ಭಾರತ ದುರ್ಬಲ ದೇಶವಾಗಿ ಉಳಿದಿಲ್ಲ. ತನ್ನ ಏಕತೆ, ಸಾರ್ವಭೌಮತೆ ಮತ್ತು ಪ್ರಾದೇಶಿಕ ಸಮಗ್ರತೆಗೆ ಬೆದರಿಕೆ ಹಾಕುವ ಯಾರಿಗಾದರೂ ತಕ್ಕ ಪ್ರತ್ಯುತ್ತರ ನೀಡಲಿದೆ. ನಮ್ಮ ರಾಜಕೀಯ ವಿರೋಧಿಗಳು ಸತ್ಯಗಳನ್ನು ಸಂಪೂರ್ಣವಾಗಿ ತಿಳಿಯದೆ ಕೆಲವು ಪ್ರಶ್ನೆಗಳನ್ನು ಎತ್ತುತ್ತಲೇ ಇರುತ್ತಾರೆ” ಎಂದು ಅವರು ಪೂರ್ವ ಲಡಾಖ್ ಬಿಕ್ಕಟ್ಟಿನ ಬಗ್ಗೆ ಸರಾಕಾರದ ವಿರುದ್ಧದ ವಿರೋಧಿಗಳ ಟೀಕೆಗಳನ್ನು ಉಲ್ಲೇಖಿಸಿ ಹೇಳಿದರು.

1962 ರ ಚೀನಾ-ಭಾರತ ಯುದ್ಧದ ಸಮಯದಲ್ಲಿ ಏನಾಯಿತು ಎಂಬುದರ ಬಗ್ಗೆ ನಾನು ಹೇಳಲು ಬಯಸುವುದಿಲ್ಲ. ಆದರೆ ನಮ್ಮ ಸರಕಾರ ಇರುವಾಗ ಒಂದು ಇಂಚು ಭೂಮಿಯೂ ಚೀನಾದಕ್ಕೆ ಹೋಗುವುದಿಲ್ಲ ಎಂದು ನಾನು ರಕ್ಷಣಾ ಸಚಿವನಾಗಿ ದೇಶಕ್ಕೆ ಭರವಸೆ ನೀಡಲು ಬಯಸುತ್ತೇನೆ ಎಂದು ಝೀ ನ್ಯೂಸ್ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಹೇಳಿದ್ದಾರೆ.

ಎನ್‌ಡಿಎ ಸರ್ಕಾರ ಯಾವುದೇ ಬೆಲೆ ತೆತ್ತಾದರೂ ದೇಶದ ಹೆಮ್ಮೆ ಮತ್ತು ಪ್ರತಿಷ್ಠೆಯ ಮೇಲೆ ರಾಜಿ ಮಾಡಿಕೊಳ್ಳುವುದಿಲ್ಲ ಎಂದರು.

Advertisement

Udayavani is now on Telegram. Click here to join our channel and stay updated with the latest news.

Next