Advertisement

ಗುಲಾಲಿ ಚೆಂಡಿನ ಟೆಸ್ಟ್: ಟಾಸ್ ಗೆದ್ದು ಬ್ಯಾಟಿಂಗ್ ಆಯ್ಕೆ ಮಾಡಿಕೊಂಡ ಭಾರತ

02:30 PM Mar 12, 2022 | Team Udayavani |

ಬೆಂಗಳೂರು: ಪ್ರವಾಸಿ ಶ್ರೀಲಂಕಾ ಎದುರು ಎಂ. ಚಿನ್ನಸ್ವಾಮಿ ಸ್ಟೇಡಿಯಂ’ನಲ್ಲಿ ಶನಿವಾರ ಆರಂಭವಾಗಿರುವ ಸರಣಿಯ ದ್ವಿತೀಯ ಹಾಗೂ ಅಂತಿಮ ಟೆಸ್ಟ್‌ ಪಂದ್ಯದಲ್ಲಿ ಟಾಸ್ ಗೆದ್ದಿರುವ ಭಾರತ ತಂಡದ ನಾಯಕ ರೋಹಿತ್ ಶರ್ಮಾ ಬ್ಯಾಟಿಂಗ್ ಆಯ್ಕೆ ಮಾಡಿಕೊಂಡಿದ್ದಾರೆ.

Advertisement

ಹಗಲು-ರಾತ್ರಿ ಪಂದ್ಯ ಆಡಲಾಗುತ್ತಿದ್ದು, ಬೆಂಗಳೂರಿನಲ್ಲಿ ನಡೆಯಲಿರುವ ಮೊದಲ ಫ್ಲಡ್‌ ಲೈಟ್‌ ಟೆಸ್ಟ್‌ ಆಗಿರುವುದರಿಂದ ಕ್ರಿಕೆಟ್‌ ಅಭಿಮಾನಿಗಳಲ್ಲಿ ಭಾರಿ ಕುತೂಹಲ ಮೂಡಿದೆ. ಬೆಂಗಳೂರಿನಲ್ಲಿ 2 ವರ್ಷಗಳ ಬಳಿಕ ಅಂತಾರಾಷ್ಟ್ರೀಯ ಪಂದ್ಯ ಆಡಲಾಗುತ್ತಿದ್ದು, 4 ವರ್ಷಗಳ ಬಳಿಕ ಟೆಸ್ಟ್‌ ಪಂದ್ಯ ಆಡಲಾಗುತ್ತಿದೆ.

ಭಾರತವು ಒಂದು ಬದಲಾವಣೆ ಮಾಡಿದ್ದು, ಆಡುವ ಹನ್ನೊಂದರ ಬಳಗದಲ್ಲಿ ಜಯಂತ್ ಠಾಕೂರ್ ಬದಲಿಗೆ ಫಿಟ್ ಆಗಿರುವ ಅಕ್ಷರ್ ಪಟೇಲ್ ಅನ್ನು ಮತ್ತೊಮ್ಮೆ ಆಯ್ಕೆ ಮಾಡಿದೆ.

ಶ್ರೀಲಂಕಾ ಎರಡು ಬದಲಾವಣೆಗಳನ್ನು ಮಾಡಿದ್ದು, ಪಾತುಮ್ ನಿಸ್ಸಾಂಕ ಮತ್ತು ಲಹಿರು ಕುಮಾರ, ಗಾಯಗಳಿಂದಾಗಿ ಹೊರಗುಳಿದಿದ್ದು,ಅವರ ಬದಲಿಗೆ ಕುಸಾಲ್ ಮೆಂಡಿಸ್ ಮತ್ತು ಪ್ರವೀಣ್ ಜಯವಿಕ್ರಮ ಅವರನ್ನು ತಂಡಕ್ಕೆ ಸೇರಿಸಿಕೊಂಡಿದೆ.

ಮೊದಲ ಟೆಸ್ಟ್‌ನಲ್ಲಿ ಭಾರತ ಇನ್ನಿಂಗ್ಸ್ ಮತ್ತು 222 ರನ್‌ಗಳ ಜಯ ಸಾಧಿಸಿತ್ತು.

Advertisement

ಉಭಯ ತಂಡಗಳ ಆಡುವ ಬಳಗ

ಭಾರತ : ಮಯಾಂಕ್ ಅಗರ್ವಾಲ್, ರೋಹಿತ್ ಶರ್ಮಾ (ನಾಯಕ), ಹನುಮ ವಿಹಾರಿ, ವಿರಾಟ್ ಕೊಹ್ಲಿ, ರಿಷಬ್ ಪಂತ್ (ವಿ.ಕೀ.), ಶ್ರೇಯಸ್ ಅಯ್ಯರ್, ರವೀಂದ್ರ ಜಡೇಜಾ, ರವಿಚಂದ್ರನ್ ಅಶ್ವಿನ್, ಅಕ್ಷರ್ ಪಟೇಲ್, ಮೊಹಮ್ಮದ್ ಶಮಿ, ಜಸ್ಪ್ರೀತ್ ಬುಮ್ರಾ.

ಶ್ರೀಲಂಕಾ : ದಿಮುತ್ ಕರುಣಾರತ್ನೆ (ನಾಯಕ), ಲಹಿರು ತಿರಿಮನ್ನೆ, ಕುಸಲ್ ಮೆಂಡಿಸ್, ಏಂಜೆಲೊ ಮ್ಯಾಥ್ಯೂಸ್, ಧನಂಜಯ ಡಿ ಸಿಲ್ವಾ, ಚರಿತ್ ಅಸಲಂಕಾ, ನಿರೋಶನ್ ಡಿಕ್ವೆಲ್ಲಾ (ವಿ.ಕೀ.), ಸುರಂಗ ಲಕ್ಮಲ್, ಲಸಿತ್ ಎಂಬುಲ್ದೇನಿಯ, ವಿಶ್ವ ಫೆರ್ನಾಂಡೋ, ಪ್ರವೀಣ್ ಜಯವಿಕ್ರಮ.

Advertisement

Udayavani is now on Telegram. Click here to join our channel and stay updated with the latest news.

Next