Advertisement

World Cup ಫೈನಲ್ ಕೋಲ್ಕತಾ ಇಲ್ಲವೇ ಮುಂಬೈನಲ್ಲಿ ನಡೆದಿದ್ದರೆ ಭಾರತ ಗೆಲ್ಲುತ್ತಿತ್ತು: ಮಮತಾ

08:08 PM Nov 23, 2023 | Vishnudas Patil |

ಕೋಲ್ಕತಾ: ಕೊಲ್ಕತ್ತಾ ಅಥವಾ ಮುಂಬೈನಲ್ಲಿ ಫೈನಲ್ ಪಂದ್ಯ ನಡೆದಿದ್ದರೆ ಭಾರತ ಕ್ರಿಕೆಟ್ ವಿಶ್ವಕಪ್ ಗೆಲ್ಲುತ್ತಿತ್ತು ಎಂದು ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ ಹೇಳಿಕೆ ನೀಡಿದ್ದಾರೆ.

Advertisement

ನೇತಾಜಿ ಒಳಾಂಗಣ ಕ್ರೀಡಾಂಗಣದಲ್ಲಿ ಪಕ್ಷದ ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡಿ, ದೇಶದ ಕ್ರಿಕೆಟ್ ತಂಡವನ್ನು ಕೇಸರಿಮಯಗೊಳಿಸುವ ಪ್ರಯತ್ನಗಳು ನಡೆಯುತ್ತಿವೆ ಎಂದು ಆರೋಪಿಸಿದರು.

ಬಿಜೆಪಿ ವಿರುದ್ಧ ವಾಗ್ದಾಳಿ ಮುಂದುವರಿಸಿ, ”ಪಾಪಿಗಳು ಎಲ್ಲಿಗೆ ಹೋದರೂ ಅವರು ತಮ್ಮ ಪಾಪಗಳನ್ನು ತೆಗೆದುಕೊಂಡು ಹೋಗುತ್ತಾರೆ.ಭಾರತ ತಂಡವು ಎಷ್ಟು ಚೆನ್ನಾಗಿ ಆಡಿದೆ ಎಂದರೆ ಪಾಪಿಗಳು ಭಾಗವಹಿಸಿದ್ದನ್ನು ಹೊರತುಪಡಿಸಿ ವಿಶ್ವಕಪ್‌ನಲ್ಲಿ ಎಲ್ಲಾ ಪಂದ್ಯಗಳನ್ನು ಗೆದ್ದಿದ್ದಾರೆ” ಎಂದು ಕಿಡಿ ಕಾರಿದರು.

Advertisement

Udayavani is now on Telegram. Click here to join our channel and stay updated with the latest news.

Next