Advertisement

ಭಾರತೀಯರಿಗೆ ಜನಾಂಗೀಯ ನಿಂದನೆ

12:40 AM Mar 07, 2022 | Team Udayavani |

ಉಕ್ರೇನ್‌ ಗಡಿ ದಾಟಿ ಪೋಲೆಂಡ್‌ಗೆ ತೆರಳುವ ಭಾರತ, ದಕ್ಷಿಣ ಆಫ್ರಿಕಾದ ವಿದ್ಯಾರ್ಥಿಗಳಿಗೆ ಜನಾಂಗೀಯ ನಿಂದನೆ ಮಾಡಲಾಗುತ್ತಿದೆ ಎಂಬ ಆರೋಪ ಕೇಳಿಬಂದಿದೆ.

Advertisement

ಹಲವು ಅಂತಾರಾಷ್ಟ್ರೀಯ ಮಾಧ್ಯಮಗಳಲ್ಲಿ ವರದಿಯಾದಂತೆ ಉಕ್ರೇನ್‌ನಿಂದ ಪೋಲೆಂಡ್‌ಗೆ ತಲು ಪಲು ಸಾರ್ವಜನಿಕ ಸಾರಿಗೆ ವ್ಯವಸ್ಥೆ ಬಳಕೆ ಮಾಡುವುದರಿಂದ ವಿದ್ಯಾರ್ಥಿಗಳಿಗೆ ನಿರ್ಬಂಧ ಹೇರಲಾಗಿದೆ.

ಚರ್ಮದ ಬಣ್ಣವನ್ನು ಗಮನಿಸಿಕೊಂಡು ಕೆಲವು ರಾಷ್ಟ್ರಗಳ ವಿದ್ಯಾರ್ಥಿಗಳಿಗೆ ಪೊಲೀಸರು ಥಳಿಸಿದ್ದಾರೆ ಎಂಬ ಆರೋಪಗಳೂ ಕೇಳಿ ಬಂದಿವೆ.

ಈ ವರದಿಗಳ ಬಗ್ಗೆ ಪ್ರತಿಕ್ರಿಯೆ ನೀಡಿರುವ ಉಕ್ರೇನ್‌ನ ವಿದೇಶಾಂಗ ಸಚಿವಾಲಯ ಗಡಿ ಪ್ರದೇಶಗಳಲ್ಲಿ ವಿದೇಶಗಳ ವಿದ್ಯಾರ್ಥಿಗಳಿಗೆ ನೆರವು ನೀಡಬೇಕು. ಈ ನಿಟ್ಟಿನಲ್ಲಿ ಉಕ್ರೇನ್‌ ಸರಕಾರ ಎಲ್ಲ ಪ್ರಯತ್ನಗಳನ್ನು ಮಾಡುತ್ತಿದೆ ಎಂದು ಸ್ಪಷ್ಟನೆ ನೀಡಿದೆ.

 

Advertisement
Advertisement

Udayavani is now on Telegram. Click here to join our channel and stay updated with the latest news.

Next