Advertisement

Central government ಒಪ್ಪಿದರೆ ಪಾಕ್‌ಗೆ ಭಾರತ ಕ್ರಿಕೆಟ್‌ ತಂಡ: ರಾಜೀವ್‌ ಶುಕ್ಲ

12:14 AM May 07, 2024 | Team Udayavani |

ಹೊಸದಿಲ್ಲಿ: ಕೇಂದ್ರ ಸರಕಾರ ಒಪ್ಪಿದರೆ ಮಾತ್ರ, ಮುಂದಿನ ವರ್ಷ ಪಾಕಿಸ್ಥಾನದಲ್ಲಿ ನಡೆಯಲಿರುವ ಐಸಿಸಿ ಚಾಂಪಿಯನ್ಸ್‌ ಟ್ರೋಫಿಗೆ ಭಾರತ ತಂಡವನ್ನು ಕಳುಹಿಸುತ್ತೇವೆ ಎಂದು ಬಿಸಿಸಿಐ ಉಪಾಧ್ಯಕ್ಷ ರಾಜೀವ್‌ ಶುಕ್ಲ ಹೇಳಿದ್ದಾರೆ.

Advertisement

ದಿಲ್ಲಿಯಲ್ಲಿ ಮಾತನಾಡಿದ ಶುಕ್ಲ, ಚಾಂಪಿಯನ್ಸ್‌ ಟ್ರೋಫಿ ಸಂಬಂಧ ಸರಕಾರ ನಮಗೆ ಏನು ಹೇಳುತ್ತದೆಯೋ ಅದನ್ನು ಪಾಲಿಸುತ್ತೇವೆ. ಸರಕಾರ ಅನುಮತಿ ನೀಡಿದರೆ ಮಾತ್ರ ಭಾರತ ತಂಡವನ್ನು ಪಾಕಿಸ್ಥಾನಕ್ಕೆ ಕಳುಹಿಸುತ್ತೇವೆ ಎಂದಿದ್ದಾರೆ.

ಬೆದರಿಕೆ ಬಂದಿದೆ
ವೆಸ್ಟ್ ಇಂಡೀಸ್ ಕ್ರಿಕೆಟ್ ಮಂಡಳಿಯು ಟಿ 20 ವಿಶ್ವಕಪ್ ಪಂದ್ಯಗಳ ಸಮಯದಲ್ಲಿ ಭಯೋತ್ಪಾದಕ ದಾಳಿಯ ಬೆದರಿಕೆಯನ್ನು ಸ್ವೀಕರಿಸಿದೆ. ಮಾಹಿತಿ ಪ್ರಕಾರ ಐಎಸ್ ಉಗ್ರರು ದಾಳಿ ಸಂಚು ರೂಪಿಸುತ್ತಿದ್ದಾರೆ. ಈ ವಿಚಾರದಲ್ಲಿ ರಾಜೀವ್ ಶುಕ್ಲಾ ಎಲ್ಲರಿಗೂ ಸಾಂತ್ವನ ಹೇಳಿದ್ದು, ಯಾವುದೇ ಪಂದ್ಯಾವಳಿಗೆ ಆಟಗಾರರ ಭದ್ರತೆಯ ಜವಾಬ್ದಾರಿಯನ್ನು ಐಸಿಸಿ ತೆಗೆದುಕೊಳ್ಳುತ್ತದೆ ಎಂದು ಹೇಳಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next