Advertisement

ಕಂದಹಾರ್ ನಲ್ಲಿ ತಾಲಿಬಾನ್ ಹಿಡಿತ: ರಾಯಭಾರ ಕಚೇರಿಯ ಸಿಬ್ಬಂದಿಗಳ ವಾಪಾಸ್ ಗೆ ಭಾರತ ಕ್ರಮ

01:43 PM Jul 11, 2021 | Team Udayavani |

ಹೊಸದಿಲ್ಲಿ: ಅಫ್ಘಾನಿಸ್ತಾನದಲ್ಲಿ ಹದಗೆಡುತ್ತಿರುವ ಭದ್ರತಾ ಪರಿಸ್ಥಿತಿ ಮತ್ತು ದಕ್ಷಿಣ ಅಫ್ಘಾನ್ ನಗರದ ಸುತ್ತಮುತ್ತಲಿನ ಹೊಸ ಪ್ರದೇಶಗಳ ಮೇಲೆ ತಾಲಿಬಾನ್ ಹಿಡಿತ ಸಾಧಿಸುತ್ತಿರುವುದನ್ನು ಗಮನದಲ್ಲಿಟ್ಟುಕೊಂಡು ಭಾರತವು ಸುಮಾರು 50 ಭಾರತೀಯ ರಾಜತಾಂತ್ರಿಕರು ಮತ್ತು ಭದ್ರತಾ ಅಧಿಕಾರಿಗಳನ್ನು ಕಂದಹಾರ್‌ನ ತನ್ನ ದೂತಾವಾಸದಿಂದ ಕರೆಸಿಕೊಂಡಿದೆ.

Advertisement

ಶನಿವಾರ ಭಾರತೀಯ ವಾಯುಪಡೆಯ ವಿಮಾನದಲ್ಲಿ 50 ಭಾರತೀಯರನ್ನು ನವದೆಹಲಿಗೆ ಕರೆತರಲಾಗಿದೆ ಎಂದು ಮೂಲಗಳು ತಿಳಿಸಿವೆ.

“ಸ್ಥಳೀಯ ಸಿಬ್ಬಂದಿ ಇನ್ನೂ ಕಾರ್ಯಾಚರಣೆಯಲ್ಲಿದ್ದಾರೆ. ಆದರೆ, ಪ್ರಾಯೋಗಿಕ ಉದ್ದೇಶಗಳಿಗಾಗಿ, ದೂತಾವಾಸವನ್ನು ತಾತ್ಕಾಲಿಕವಾಗಿ ಮುಚ್ಚಲಾಗಿದೆ” ಎಂದು ಮೂಲಗಳು ತಿಳಿಸಿವೆ.

ಇದನ್ನೂ ಓದಿ:ಪದ್ಮ ಪ್ರಶಸ್ತಿಗಾಗಿ ಸಾಧಕರನ್ನು ನಾಮನಿರ್ದೇಶನ ಮಾಡಿ: ನಾಗರಿಕರಿಗೆ ಪ್ರಧಾನಿ ಮೋದಿ ವಿನಂತಿ

ಸದ್ಯದಲ್ಲಿ ಪರಿಸ್ಥಿತಿ ಗಂಭೀರವಾಗಿರುವುದರಿಂದ ಭಾರತ ಕಂದಹಾರ್ ನಲ್ಲಿರುವ ಧೂತವಾಸ ಕಚೇರಿಯನ್ನು ತಾತ್ಕಾಲಿಕವಾಗಿ ಮುಚ್ಚಲು ನಿರ್ಧರಿಸಿದೆ. ಆದರೆ ಧೀರ್ಘಕಾಲಿಕವಾಗಿ ಧೂತವಾಸ ವ್ಯವಹಾರಗಳನ್ನು ಕಡಿತ ಮಾಡುವ ಕುರಿತು ಯಾವ ನಿರ್ಧಾರಗಳನ್ನು ಮಾಡಿಲ್ಲ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

Advertisement

ಆಫ್ಘಾನಿಸ್ಥಾನದಲ್ಲಿ ಕಳೆದ ಎರಡು ದಶಕಗಳಿಂದ ತಾಲಿಬಾನಿಗಳ ವಿರುದ್ಧ ಹೋರಾಟ ನಡೆಸಿದ್ದ ಅಮೆರಿಕಾ ಇತ್ತಿಚೆಗೆ ತನ್ನ ಭದ್ರತಾ ಪಡೆಗಳನ್ನು ಹಿಂಪಡೆಯುವ ಪ್ರಕ್ರಿಯೆಗಳನ್ನು ಆರಂಭಿಸಿದೆ.

ದಕ್ಷಿಣ ಅಫ್ಘಾನಿಸ್ತಾನದಲ್ಲಿ ತೀವ್ರ ಘರ್ಷಣೆಗಳಲ್ಲಿ ಪಾಕಿಸ್ತಾನ ಮೂಲದ  ಭಯೋತ್ಪಾದಕ ಗುಂಪು ಲಷ್ಕರ್-ಎ-ತೈಬಾ ದ ಸಾವಿರಾರು ಸಹಚರರು ತಾಲಿಬಾನ್ ಹೋರಾಟಗಾರರೊಂದಿಗೆ ಸೇರ್ಪಡೆಗೊಂಡಿದ್ದಾರೆ ಎಂಬ ವರದಿಗಳು ಹೊರಬಿದ್ದ ಕಾರಣ, ಭಾರತೀಯ ಭದ್ರತಾ ಸಂಸ್ಥೆಯು ಭಾರತೀಯ ಸಿಬ್ಬಂದಿಯ ಸುರಕ್ಷತೆಯ ಬಗ್ಗೆ ಈ ನಿರ್ಧಾರ ಕೈಗೊಂಡಿದೆ.

ಇದನ್ನೂ ಓದಿ: ಯಾರೇ ರಾಜಕಾರಣಿ ಆದ್ರೂ ಎಲ್ಲೇ ಮೀರಿ ವರ್ತಿಸಬಾರದು,ಡಿಕೆಶಿ ವರ್ತನೆ ವಿರುದ್ಧ ಕಟೀಲ್ ವಾಗ್ದಾಳಿ

ಆಫ್ಘಾನಿಸ್ಥಾನದಲ್ಲಿ ಕಳೆದ ಎರಡು ದಶಕಗಳಿಂದ ತಾಲಿಬಾನಿಗಳ ವಿರುದ್ಧ ಹೋರಾಟ ನಡೆಸಿದ್ದ ಅಮೆರಿಕಾ ಇತ್ತಿಚೆಗೆ ತನ್ನ ಭದ್ರತಾ ಪಡೆಗಳನ್ನು ಹಿಂಪಡೆಯುವ ಪ್ರಕ್ರಿಯೆಗಳನ್ನು ಆರಂಭಿಸಿದೆ. ಅದು ಬಹುತೇಕ ಆಗಸ್ಟ್ ವೇಳೆಗೆ ಅಂತ್ಯವಾಗಲಿದೆ. ಅದರ ಬೆನ್ನಲ್ಲೆ ಆಫ್ಘನ್‍ನ ಪಶ್ಚಿಮವಲಯದ ಪ್ರಮುಖ ಪ್ರದೇಶಗಳನ್ನು ತಾಲಿಬಾನಿಗಳು ತಮ್ಮ ವಶಕ್ಕೆ ತೆಗೆದುಕೊಳ್ಳುತ್ತಿದ್ದಾರೆ. ಕಳೆದ ಎರಡು ದಿನಗಳಿಂದ ಈ ಬೆಳವಣಿಗೆಗಳ ಮೇಲೆ ನಿಗಾ ಇಟ್ಟಿದ್ದ ಭಾರತ ತಮ್ಮ ದೇಶದ ಪ್ರಜೆಗಳ ಸುರಕ್ಷತೆ ಬಗ್ಗೆ ತುರ್ತು ಸ್ಪಂದನೆ ಮಾಡಿದೆ

Advertisement

Udayavani is now on Telegram. Click here to join our channel and stay updated with the latest news.

Next