Advertisement

ನಾಡಿದ್ದು ವೈದ್ಯರ ಮುಷ್ಕರ

01:56 AM Jun 15, 2019 | mahesh |

ಹೊಸದಿಲ್ಲಿ: ಪಶ್ಚಿಮ ಬಂಗಾಲದಲ್ಲಿ ಸಹೋದ್ಯೋಗಿಗಳ ಮೇಲಿನ ಹಲ್ಲೆ ಖಂಡಿಸಿ ಭಾರತೀಯ ವೈದ್ಯಕೀಯ ಸಂಘ (ಐಎಂಎ) ಜೂ. 17ರಂದು ದೇಶವ್ಯಾಪಿ ಮುಷ್ಕರಕ್ಕೆ ಕರೆ ನೀಡಿದೆ. ಹೀಗಾಗಿ ಅಂದು ಅಗತ್ಯ ಸೇವೆ ಹೊರತುಪಡಿಸಿ ಬೇರೆ ಯಾವುದೇ ವೈದ್ಯಕೀಯ ಸೇವೆಗಳು ಲಭ್ಯವಿರುವುದಿಲ್ಲ.

Advertisement

ಕೋಲ್ಕತಾದಲ್ಲಿ ಹಲ್ಲೆ ಘಟನೆಯನ್ನು ಖಂಡಿಸಿ ವೈದ್ಯರು ನಡೆಸುತ್ತಿರುವ ಮುಷ್ಕರ 4ನೇ ದಿನ ಪೂರೈಸಿದ್ದು, ಬೆಂಗಳೂರು ಸಹಿತ ದೇಶದ ಇತರೆಡೆಗಳಲ್ಲೂ ವ್ಯಾಪಕ ಬೆಂಬಲ ವ್ಯಕ್ತವಾಗಿದೆ.

ಶನಿವಾರ ಮತ್ತು ರವಿವಾರ ದೇಶಾದ್ಯಂತ ವೈದ್ಯರು ಕಪ್ಪುಪಟ್ಟಿ ಧರಿಸಿ ಕಾರ್ಯನಿರ್ವಹಿಸಲಿದ್ದಾರೆ. ಜತೆಗೆ ಧರಣಿ ಮತ್ತು ಮೌನ ಮೆರವಣಿಗೆಗಳನ್ನು ಕೈಗೊಳ್ಳಲಿದ್ದಾರೆ. ಸೋಮವಾರದಂದು ಒಪಿಡಿ (ಹೊರರೋಗಿಗಳ ವಿಭಾಗ) ಸಹಿತ ತುರ್ತು ಸೇವೆಗಳಲ್ಲದ ಎಲ್ಲ ಸೇವೆಗಳೂ ಬೆಳಗ್ಗೆ 6ರಿಂದ 24 ಗಂಟೆಗಳ ಕಾಲ ಸ್ಥಗಿತಗೊಳ್ಳಲಿವೆ. ತುರ್ತು ಸೇವೆಗಳು ಮಾತ್ರ ಲಭ್ಯವಿರಲಿವೆ ಎಂದು ಐಎಂಎ ತಿಳಿಸಿದೆ. ಈ ಮುಷ್ಕರದಲ್ಲಿ 3.5 ಲಕ್ಷ ವೈದ್ಯರು ಪಾಲ್ಗೊಳ್ಳಲಿದ್ದಾರೆ ಎಂದೂ ಹೇಳಿದೆ.

Advertisement

Udayavani is now on Telegram. Click here to join our channel and stay updated with the latest news.

Next