Advertisement

ಜೂನ್ 17: ಹಲ್ಲೆ ಖಂಡಿಸಿ ದೇಶಾದ್ಯಂತ ವೈದ್ಯರ ಮುಷ್ಕರ: IMA

09:38 AM Jun 18, 2019 | Nagendra Trasi |

ಕೋಲ್ಕತಾ: ಪಶ್ಚಿಮಬಂಗಾಳದಲ್ಲಿನ ವೈದ್ಯರ ಮೇಲಿನ ಹಲ್ಲೆ ಖಂಡಿಸಿ ಹಾಗೂ ವೈದ್ಯರ ಮುಷ್ಕರಕ್ಕೆ ಬೆಂಬಲ ವ್ಯಕ್ತಪಡಿಸಿ ಜೂನ್ 17ರಂದು ಸೇವೆಯನ್ನು ಸ್ಥಗಿತಗೊಳಿಸಿ ದೇಶಾದ್ಯಂತ ಮುಷ್ಕರ ನಡೆಸಲು ಇಂಡಿಯನ್ ಮೆಡಿಕಲ್ ಅಸೋಸಿಯೇಶನ್(ಐಎಂಎ) ಶುಕ್ರವಾರ ಘೋಷಿಸಿದೆ.

Advertisement

ಹೊರರೋಗಿ ವಿಭಾಗ ಸೇರಿದಂತೆ ಎಲ್ಲಾ ಪ್ರಮುಖವಲ್ಲದ ಸೇವೆಯನ್ನು ಸೋಮವಾರ ಬೆಳಗ್ಗೆ 6ಗಂಟೆಯಿಂದ ಸ್ಥಗಿತಗೊಳಿಸಲಾಗುವುದು. ಆದರೆ ತುರ್ತು ಚಿಕಿತ್ಸೆ ಮತ್ತು ಅಪಘಾತ ಸೇವೆ ಎಂದಿನಂತೆ ನಡೆಯಲಿದೆ ಎಂದು ಪಿಟಿಐ ವರದಿ ಮಾಡಿದೆ.

ಪಶ್ಚಿಮಬಂಗಾಳದಲ್ಲಿ ಇತ್ತೀಚೆಗೆ ವೈದ್ಯರ ಮೇಲೆ ನಡೆದ ಹಲ್ಲೆ ಖಂಡಿಸಿ ರಾಜ್ಯಾದ್ಯಂತ ಕಳೆದ ನಾಲ್ಕು ದಿನಗಳಿಂದ ಪ್ರತಿಭಟನೆ ನಡೆಯುತ್ತಿದೆ. ಇದರಿಂದಾಗಿ ಚಿಕಿತ್ಸೆ ಸಿಗದೆ ರೋಗಿಗಳು ಪರದಾಡುವಂತಾಗಿದೆ.

ಕೆಲವು ದಿನಗಳ ಹಿಂದೆ ಕೋಲ್ಕತಾದ ಎನ್ ಆರ್ ಎಸ್ ಮೆಡಿಕಲ್ ಕಾಲೇಜು ಹಾಗೂ ಆಸ್ಪತ್ರೆಯ ವೈದ್ಯರ ಮೇಲೆ ಹಲ್ಲೆ ನಡೆದು, ಕೆಲವು ವೈದ್ಯರಿಗೆ ಗಂಭೀರ ಗಾಯಗಳಾಗಿದ್ದವು. ಇದನ್ನು ಪ್ರತಿಭಟಿಸಿ ವೈದ್ಯರು ಮಂಗಳವಾರದಿಂದ ಪ್ರತಿಭಟನೆ ನಡೆಸುತ್ತಿದ್ದಾರೆ. ಗುರುವಾರ ಎಸ್ ಕೆಎಂ ಆಸ್ಪತ್ರೆ ಆವರಣಕ್ಕೆ ಭೇಟಿ ನೀಡಿದ ಮಮತಾ ಬ್ಯಾನರ್ಜಿ 2ಗಂಟೆಯೊಳಗೆ ಮುಷ್ಕರ ಸ್ಥಗಿತಗೊಳಿಸದಿದ್ದರೆ ಕಠಿಣ ಕ್ರಮ ಕೈಗೊಳ್ಳುವ ಬೆದರಿಕೆ ಒಡ್ಡಿದ್ದರು. ಆದರೆ ವೈದ್ಯರು ಇದಕ್ಕೆ ಬೆದರದೇ ಮುಷ್ಕರ ಮುಂದುವರಿಸಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next