ನವದೆಹಲಿ: ಭಾರತೀಯ ನೌಕಾಪಡೆಯು 2047 ರ ವೇಳೆಗೆ ‘ಆತ್ಮನಿರ್ಭರ್’ (ಸ್ವಾವಲಂಬಿ) ಆಗಲಿದೆ ಎಂದು ಸರ್ಕಾರಕ್ಕೆ ಭರವಸೆ ನೀಡುವುದಾಗಿ ನೌಕಾಪಡೆಯ ಮುಖ್ಯಸ್ಥ ಅಡ್ಮಿರಲ್ ಆರ್. ಹರಿಕುಮಾರ್ ಶನಿವಾರ ಹೇಳಿದ್ದಾರೆ.
ಪತ್ರಿಕಾಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಅವರು, ಹಿಂದೂ ಮಹಾಸಾಗರ ಪ್ರದೇಶದಲ್ಲಿ ಚೀನದ ವಿವಿಧ ಮಿಲಿಟರಿ ಮತ್ತು ಸಂಶೋಧನಾ ಹಡಗುಗಳ ಚಲನವಲನಗಳ ಮೇಲೆ ನೌಕಾಪಡೆಯು ತೀವ್ರ ನಿಗಾ ಇರಿಸುತ್ತದೆ ಎಂದು ಹೇಳಿದರು.
ಕಳೆದ ಒಂದು ವರ್ಷದಲ್ಲಿ ಭಾರತೀಯ ನೌಕಾಪಡೆಯು ಅತ್ಯಂತ ಹೆಚ್ಚಿನ ಕಾರ್ಯಾಚರಣೆಯ ವೇಗವನ್ನು ಸಾಧಿಸಿದ್ದು, ಇದರ ಜೊತೆಗೆ ಭದ್ರತೆಗೆ ಹೆಚ್ಚಿನ ಒತ್ತು ನೀಡಲಾಗುವುದು ಎಂದು ಅವರು ಹೇಳಿದರು.
ಇದನ್ನೂ ಓದಿ:ಕಬ್ಬಿನಾಲೆಯ ಪ್ರಕೃತಿ ಸೌಂದರ್ಯಯಕ್ಕೆ ಮತ್ತೊಂದು ಹೆಸರೇ ‘ಮತ್ತಾವು ಜಲಪಾತ’…
Related Articles
ಆತ್ಮನಿರ್ಭರ್ ಭಾರತ್ ಕುರಿತು ಸರ್ಕಾರವು ನಮಗೆ ಸ್ಪಷ್ಟ ಮಾರ್ಗಸೂಚಿಗಳನ್ನು ನೀಡಿದೆ. 2047 ರ ವೇಳೆಗೆ ಭಾರತೀಯ ನೌಕಾಪಡೆಯು ಆತ್ಮನಿರ್ಭರ್ ಆಗಲಿದೆ ಎಂದು ನಾವು ಭರವಸೆ ನೀಡಿದ್ದೇವೆ ಎಂದು ನೌಕಾಪಡೆಯ ಮುಖ್ಯಸ್ಥರು ಹೇಳಿದರು.
ಅಗ್ನಿವೀರ್ ಯೋಜನೆಯಡಿಯಲ್ಲಿ ಭಾರತೀಯ ನೌಕಾಪಡೆಗೆ ಸುಮಾರು 3,000 ಅಗ್ನಿವೀರ್ಗಳು ಆಗಮಿಸಿದ್ದು, ಅವರಲ್ಲಿ 341 ಮಹಿಳೆಯರನ್ನು ಮೊದಲ ಬಾರಿಗೆ ನಾವು ಮಹಿಳಾ ನಾವಿಕರನ್ನು ಸೇರ್ಪಡೆಗೊಳಿಸುತ್ತಿದ್ದೇವೆ ಎಂದು ಹೇಳಿದರು.