Advertisement

ಕುಕ್ಕೆ ಸುಬ್ರ ಹ್ಮಣ್ಯಕ್ಕೆ ಬಂದಿದ್ದ ಯಾತ್ರಾರ್ಥಿ ಸಾವು

12:36 AM Dec 07, 2022 | Team Udayavani |

ಸುಬ್ರಹ್ಮಣ್ಯ: ಕುಕ್ಕೆ ಸುಬ್ರ ಹ್ಮಣ್ಯಕ್ಕೆ ಆಗಮಿಸಿದ್ದ ಯಾತ್ರಾರ್ಥಿ ಯೋರ್ವರು ಡಿ.6 ರಂದು ಮುಂಜಾನೆ ಹೃದಯಾಘಾತಕ್ಕೊಳಗಾಗಿ ಮೃತಪಟ್ಟಿ ರುವ ಘಟನೆ ಸಂಭವಿಸಿದೆ.

Advertisement

ಬೆಂಗಳೂರಿನ ಕಸ್ತೂರಿ ನಗರ್‌ಪೈಪ್‌ ಲೈನ್‌ ರೋಡ್‌ ನಿವಾಸಿ ಶಿವಪ್ಪ (60) ಮೃತರು. ಡಿ. 6ರ ಬೆಳಗ್ಗೆ ಸ್ನಾನಕ್ಕೆಂದು ಕುಮಾರಧಾರ ನದಿ ಬಳಿಗೆ ಬಂದಿದ್ದ ವೇಳೆ ಹೃದಯಾಘಾತಕ್ಕೊಳಗಾಗಿದ್ದು, ಕೂಡಲೇ ಸ್ಥಳೀಯ ಆಸ್ಪತ್ರೆಗೆ ದಾಖ
ಲಿಸಲಾದರೂ ಮೃತಪಟ್ಟರು. ಆ ಬಳಿಕ ಮೃತದೇಹವನ್ನು ಆಂಬ್ಯುಲೆನ್ಸ್ ಮೂಲಕ ಬೆಂಗಳೂರಿಗೆ ಕರೆದೊಯ್ಯಲಾಯಿತು ಎಂದು ತಿಳಿದುಬಂದಿದೆ.

ಕುಕ್ಕೆಯಲ್ಲಿ ಸುಸಜ್ಜಿತ ಆಸ್ಪತ್ರೆ ಇಲ್ಲದೇ ತತ್‌ಕ್ಷಣಕ್ಕೆ ಚಿಕಿತ್ಸೆ ಸಿಗದೇ ಯಾತ್ರಾರ್ಥಿ ಸಾವನ್ನಪ್ಪಿದ್ದಾರೆ ಎಂದು ಮೃತರ ಸಂಬಂಧಿಕರು ಆರೋಪಿಸಿದರು.

Advertisement

Udayavani is now on Telegram. Click here to join our channel and stay updated with the latest news.

Next