Advertisement

ಇಂದಿರಾ ಕ್ಯಾಂಟೀನ್‌ ಅಡುಗೆ ಮನೆಗೆ ಬೀಗ

12:29 AM Feb 19, 2020 | Lakshmi GovindaRaj |

ಬೆಂಗಳೂರು: ನಾಯಂಡಹಳ್ಳಿಯಲ್ಲಿ ರುವ ಇಂದಿರಾ ಕ್ಯಾಂಟೀನ್‌ ಅಡುಗೆ ಕೋಣೆ ವಿಚಾರ ಮತ್ತೆ ಮುನ್ನಲೆಗೆ ಬಂದಿದೆ. ಇಂದಿರಾ ಕ್ಯಾಂಟೀನ್‌ ಅಡುಗೆ ಕೋಣೆ ಜಾಗದಲ್ಲಿ ಹೆರಿಗೆ ಆಸ್ಪತ್ರೆ ನಿರ್ಮಾಣ ಮಾಡಲು ವಸತಿ ಸಚಿವ ವಿ.ಸೋಮಣ್ಣ ಮುಂದಾಗಿದ್ದಾರೆ.

Advertisement

ಈ ಸಂಬಂಧ ಸುದ್ದಿಗಾರರ ಜತೆ ಮಾತ ನಾಡಿದ ಮೇಯರ್‌ ಎಂ.ಗೌತಮ್‌ಕುಮಾರ್‌, ಇಂದಿರಾ ಕ್ಯಾಂಟೀನ್‌ ಅಡುಗೆ ಮಾಡುವುದಕ್ಕೆ ಈಗ ನಿಗದಿಯಾಗಿರುವ ಪ್ರದೇಶ ಕೊಳಚೆ ನಿರ್ಮೂಲನ ಮಂಡಳಿಗೆ ಒಳಪಟ್ಟಿದೆ. ನಾಯಂಡಹಳ್ಳಿ ವ್ಯಾಪ್ತಿಯಲ್ಲಿ ಹೆರಿಗೆ ಆಸ್ಪತ್ರೆ ನಿರ್ಮಿಸುವಂತೆ ಸಾರ್ವಜನಿಕರು ಕೇಳಿದ್ದು, ಸಚಿವರು ಸ್ಪಂದಿಸಿದ್ದಾರೆ. ನಾಯಂಡಹಳ್ಳಿಯಲ್ಲಿರುವ ಅಡುಗೆ ಕೋಣೆಗೆ ಪರ್ಯ ಯವಾಗಿ 2 ತಿಂಗಳ ಹಿಂದೆ ದೀಪಾಂಜಲಿ ನಗರದಲ್ಲಿ ಬದಲಿ ಕಿಚನ್‌ ನಿರ್ಮಾಣ ಮಾಡಲಾಗಿದೆ ಎಂದರು.

ಚೆಫ್ಟಾಕ್‌ನ ಗುತ್ತಿಗೆದಾರರಾದ ಗೋವಿಂದ ಪೂಜಾರಿ, ಒಪ್ಪಂದದ ಪ್ರಕಾರ ಹದಿನೈದು ಅಡುಗೆ ಮನೆ ಕೊಡುತ್ತೇವೆ ಎಂದಿದ್ದರು. ಆದರೆ, ನಂತರ 8 ಅಡುಗೆ ಕೋಣೆ ನಿರ್ಮಾಣವಾದವು. ಈಗ ಅದ ರಲ್ಲೂ ಒಂದು ತೆರವು ಮಾಡುತ್ತಿರುವುದರಿಂದ ಸಮಸ್ಯೆ ಆಗಲಿದೆ. ಸದ್ಯ ನಾಯಂಡ ಹಳ್ಳಿಗೆ ಪರ್ಯಾಯವಾಗಿ ಯಾವುದೇ ವ್ಯವಸ್ಥೆ ಮಾಡಿಲ್ಲ ಎಂದು ದೂರಿದರು.

ಗೋವಿಂದರಾಜ ನಗರ ವಿಧಾನಸಭಾ ಕ್ಷೇತ್ರದ ನಾಯಂಡಹಳ್ಳಿಯಲ್ಲಿ ಇಂದಿರಾ ಕ್ಯಾಂಟೀನ್‌ಗೆ ಆಹಾರ ಪೂರೈಕೆ ಮಾಡಲು ಕೊಳಚೆ ನಿರ್ಮೂಲನ ಮಂಡಳಿ ಜಾಗ ದಲ್ಲಿ ಅಂದಾಜು 1ಕೋಟಿ ರೂ. ವೆಚ್ಚದಲ್ಲಿ ಅಡುಗೆ ಮನೆ ನಿರ್ಮಾಣ ಮಾಡಲಾಗಿತ್ತು. ಇಲ್ಲಿಂದ 15 ಇಂದಿರಾ ಕ್ಯಾಂಟೀನ್‌ಗಳಿಗೆ ಆಹಾರ ಪೂರೈಕೆ ಮಾಡಲಾಗುತ್ತಿತ್ತು. ಸೋಮವಾರ ಅಡುಗೆ ಕೋಣೆಗೆ ಬೀಗ ಹಾಕಲಾಗಿದ್ದು, ದೀಪಾಂಜಲಿ ನಗರದಲ್ಲಿರುವ ಕ್ಯಾಂಟೀನ್‌ ಅಡುಗೆ ಮನೆಯಿಂದ ಪಶ್ಚಿಮ ವಲಯದ ಕ್ಯಾಂಟೀನ್‌ಗಳಿಗೆ ಆಹಾರ ಪೂರೈಕೆ ನಡೆಯಲಿದೆ.

Advertisement

Udayavani is now on Telegram. Click here to join our channel and stay updated with the latest news.

Next