Advertisement

ಇಂದಿರಾ ಕ್ಯಾಂಟೀನ್‌ ಹೆಸರು ಬದಲಾವಣೆ?

12:55 AM Jul 30, 2019 | Team Udayavani |

ಬೆಂಗಳೂರು: ಇಂದಿರಾ ಕ್ಯಾಂಟೀನ್‌ ಹೆಸರು ಬದಲಾಗಲಿದೆಯಾ? ರಾಜ್ಯದಲ್ಲಿ ಬಿಜೆಪಿ ಪಕ್ಷ ಅಧಿಕಾರಕ್ಕೆ ಬಂದ ಮೇಲೆ ಈ ಕುರಿತು ಚರ್ಚೆ ಪ್ರಾರಂಭವಾಗಿದೆ. 2017ರಲ್ಲಿ ಕಾಂಗ್ರೆಸ್‌ ಸರ್ಕಾರ ಇಂದಿರಾ ಕ್ಯಾಂಟೀನ್‌ ಪ್ರಾರಂಭಿಸಿದಾಗಿನಿಂದ ಈ ಯೋಜನೆಗೆ “ಇಂದಿರಾ’ಎಂದು ಕಾಂಗ್ರೆಸ್‌ ಹೆಸರಿಟ್ಟಿರುವುದು ರಾಜಕೀಯ ಗಿಮಿಕ್‌ ಎಂದು ಬಿಜೆಪಿಯ ಕೆಲವು ನಾಯಕರು ಆರೋಪಿಸಿದ್ದರು.

Advertisement

2018ರ ವಿಧಾನಸಭಾ ಚುನಾವಣೆಯ ಬಿಜೆಪಿ ಪ್ರಣಾಳಿಕೆಯಲ್ಲಿ ಅನ್ನಪೂರ್ಣ ಕ್ಯಾಂಟೀನ್‌ ತೆರೆಯುವುದಾಗಿ ಭರವಸೆ ನೀಡಿತ್ತು. ಈಗ ಬಿಜೆಪಿ ಅಧಿಕಾರಕ್ಕೆ ಬಂದಿರುವುದರಿಂದ ಇಂದಿರಾ ಕ್ಯಾಂಟೀನ್‌ ಹೆಸರನ್ನೇ ಬದಲಾಯಿಸಿ, ಅದಕ್ಕೆ ಹೊಸರೂಪ ನೀಡುವ ಮತ್ತು ಮೆನುವನ್ನು ಬದಲಾಯಿಸುವ ಸಾಧ್ಯತೆಯ ಬಗ್ಗೆ ಚರ್ಚೆ ನಡೆದಿದೆ.

ಇಂದಿರಾ ಕ್ಯಾಂಟೀನ್‌ ಹೆಸರು ಬದಲಾಯಿಸುವ ಬಗ್ಗೆ ಸರ್ಕಾರದಿಂದ ಇದುವರೆಗೂ ಯಾವುದೇ ಆದೇಶ ಬಂದಿಲ್ಲ.
-ಬಿಬಿಎಂಪಿ ಆಯುಕ್ತ ಎನ್‌. ಮಂಜುನಾಥ ಪ್ರಸಾದ್‌

ದಿವಂಗತ ಅಟಲ್‌ ಬಿಹಾರಿ ವಾಜಪೇಯಿ ಸೇರಿ ಹಲವು ಹಿರಿಯ ಬಿಜೆಪಿ ನಾಯಕರ ಹೆಸರಿರುವ ಯೋಜನೆಗಳನ್ನು ಮುಂದುವರಿಸಲಾಗುತ್ತಿದೆ. ಅದೇ ರೀತಿ ಇಂದಿರಾ ಕ್ಯಾಂಟೀನ್‌ ಯೋಜನೆಯನ್ನು ಮುಂದುವರಿಸಬಹುದು.
-ಮೇಯರ್‌, ಗಂಗಾಂಬಿಕೆ ಮಲ್ಲಿಕಾರ್ಜುನ್‌

ಇಂದಿರಾ ಕ್ಯಾಂಟೀನ್‌ ಹೆಸರು ಬದಲಾಯಿಸುವ ಬಗ್ಗೆ ಮಾಹಿತಿ ಇಲ್ಲ. ರಾಜ್ಯ ಸರ್ಕಾರ ತೆಗೆದುಕೊಳ್ಳುವ ನಿರ್ಣಯಕ್ಕೆ ಬದ್ಧರಾಗಿರುತ್ತೇವೆ.
-ಪದ್ಮನಾಭ ರೆಡ್ಡಿ, ವಿರೋಧ ಪಕ್ಷದ ನಾಯಕ

Advertisement
Advertisement

Udayavani is now on Telegram. Click here to join our channel and stay updated with the latest news.

Next