Advertisement
ಹುಬ್ಬಳ್ಳಿ-ಧಾರವಾಡ ಮಹಾನಗರ ಹಾಗೂ ಧಾರವಾಡ ಗ್ರಾಮೀಣ ಕಾಂಗ್ರೆಸ್ ಸಮಿತಿಗಳ ಆಶ್ರಯದಲ್ಲಿ ಗೋಕುಲ ಗಾರ್ಡನ್ನಲ್ಲಿ ಸೋಮವಾರ ನಡೆದ ಬೂತ್ ಮಟ್ಟದ ಪದಾಧಿಕಾರಿಗಳು ಹಾಗೂ ಕಾರ್ಯಕರ್ತರ ಸಮಾವೇಶದಲ್ಲಿ ಅವರು ಮಾತನಾಡಿದರು.
Related Articles
Advertisement
ಕಾಂಗ್ರೆಸ್ ಸರ್ಕಾರ ಉತ್ಕೃಷ್ಟ ಆಡಳಿತ ನೀಡುತ್ತಿದೆ. 4 ವರ್ಷಗಳಲ್ಲಿ ನೀರಾವರಿ ಯೋಜನೆಗೆ 62,000 ಕೋಟಿ ರೂ. ವ್ಯಯಿಸಲಾಗಿದೆ. ಸತತ 5ನೇ ವರ್ಷ ರೈತರು ಬರಗಾಲದಿಂದ ತೊಂದರೆಗೀಡಾಗಿದ್ದು, ಸಹಕಾರಿ ಬ್ಯಾಂಕ್ಗಳಲ್ಲಿದ್ದ ರೈತರ 8,556 ಕೋಟಿ ರೂ. ಸಾಲವನ್ನು ರಾಜ್ಯ ಸರ್ಕಾರ ಮನ್ನಾ ಮಾಡಿದೆ. ಇದರಿಂದ 22 ಲಕ್ಷ ರೈತರಿಗೆ ಅನುಕೂಲವಾಗಿದೆ.
ರೈತರಿಗಾಗಿ 1ಲಕ್ಷ ಕೃಷಿ ಹೊಂಡಗಳನ್ನು ನಿರ್ಮಿಸಲಾಗಿದೆ ಎಂದರು. ರಾಜ್ಯದಲ್ಲಿ ಒಟ್ಟು 5 ಕೋಟಿ ಜನರು ಒಂದಿಲ್ಲೊಂದು ಯೋಜನೆಯ ಫಲಾನುಭವಿಗಳಾಗಿದ್ದಾರೆ. 63ಲಕ್ಷ ಬಡ ಮಕ್ಕಳಿಗೆ ಶಾಲೆಯಲ್ಲಿ ಮಧ್ಯಾಹ್ನ ಬಿಸಿಯೂಟ ನೀಡಲಾಗುತ್ತಿದೆ. 47 ಲಕ್ಷ ಮಕ್ಕಳಿಗೆ ಹಾಲು ವಿತರಿಸಲಾಗುತ್ತಿದೆ.
ಪಠ್ಯ-ಪುಸ್ತಕಗಳು, ಶೂಗಳು ಹಾಗೂ 1.5 ಲಕ್ಷ ಕಾಲೇಜು ವಿದ್ಯಾರ್ಥಿಗಳಿಗೆ ಉಚಿತ ಲ್ಯಾಪ್ಟಾಪ್ ನೀಡಲಾಗಿದೆ ಎಂದರು. ಸರ್ಕಾರ 4 ವರ್ಷಗಳಲ್ಲಿ 4 ಲಕ್ಷ ಮನೆಗಳನ್ನು ನಿರ್ಮಿಸಿದೆ. ಅನ್ನಭಾಗ್ಯ ಯೋಜನೆ 1ಕೋಟಿ ಕುಟುಂಬಗಳ ಮೂರೂವರೆ ಕೋಟಿ ಜನರಿಗೆ ಅಕ್ಕಿ ನೀಡಲಾಗುತ್ತಿದೆ. ರಾಜ್ಯಾದ್ಯಂತ 10,000 ಶುದ್ಧ ನೀರಿನ ಘಟಕಗಳನ್ನು ಆರಂಭಿಸಲಾಗಿದೆ ಎಂದು ತಿಳಿಸಿದರು.