Advertisement
ಬೆಳ್ತಂಗಡಿ: ತಾಲೂಕಿನಲ್ಲಿ ನಾಲ್ಕು ವಸತಿ ಶಾಲೆಗಳು ಇದ್ದು ಸರಕಾರ ಶಿಕ್ಷಣಕ್ಕೆ ಅತ್ಯಂತ ಹೆಚ್ಚಿನ ಪ್ರೋತ್ಸಾಹ ನೀಡುತ್ತಿದೆ. ಇದರ ಸದುಪಯೋಗವನ್ನು ವಿದ್ಯಾರ್ಥಿಗಳು ಹಾಗೂ ಪೋಷಕರು ಪಡೆದುಕೊಳ್ಳಬೇಕು ಎಂದು ರಾಜ್ಯ ಸಣ್ಣ ಕೈಗಾರಿಕಾ ಅಭಿವೃದ್ಧಿ ನಿಗಮದ ಅಧ್ಯಕ್ಷ, ಶಾಸಕ ಕೆ. ವಸಂತ ಬಂಗೇರ ಹೇಳಿದರು. ಅವರು ಮಂಗಳವಾರ ಮುಂಡಾಜೆಯಲ್ಲಿ ಮೊರಾರ್ಜಿ ದೇಸಾಯಿ ವಸತಿ ಶಾಲೆಯ ರಜತ ವರ್ಷಕ್ಕೆ ಚಾಲನೆ ಹಾಗೂ ರಾಜ್ಯದಲ್ಲಿ ಬೆರಳಣಿಕೆಯಲ್ಲಿ ಮಂಜೂರಾದ ಇಂದಿರಾ ಗಾಂಧಿ ವಸತಿ ಶಾಲೆಗಳ ಪೈಕಿ ಬೆಳ್ತಂಗಡಿ ತಾಲೂಕಿನ ಹೊಸಂಗಡಿಗೆ ಮಂಜೂರಾದ ಇಂದಿರಾ ಗಾಂಧಿ ವಸತಿ ಶಾಲೆ ಉದ್ಘಾಟಿಸಿ ಮಾತನಾಡಿದರು.
Advertisement
ಇಂದಿರಾ ಗಾಂಧಿ ವಸತಿ ಶಾಲೆ ಉದ್ಘಾಟನೆ
08:40 AM Jul 26, 2017 | Karthik A |
Advertisement
Udayavani is now on Telegram. Click here to join our channel and stay updated with the latest news.