Advertisement

ದೆಹಲಿ ಮಸೀದಿಗೆ ಬಂದ ಇಂಡೋನೇಷ್ಯಾ,ಮಲೇಶ್ಯಾ ಪ್ರಜೆಗಳು ಕರ್ನಾಟಕಕ್ಕೆ ಬಂದಿದ್ದಾರೆ:ಶ್ರೀರಾಮುಲು

09:14 AM Apr 02, 2020 | Nagendra Trasi |

ಬೆಂಗಳೂರು: ದೆಹಲಿಯ ನಿಜಾಮುದ್ದೀನ್ ಮಸೀದಿಯ ಧಾರ್ಮಿಕ ಸಭೆಯಲ್ಲಿ ಸಾವಿರಾರು ಮಂದಿ ಭಾಗವಹಿಸಿರುವ ಪ್ರಕರಣ ಸದ್ದು ಮಾಡುತ್ತಿರುವ ಬೆನ್ನಲ್ಲೇ ದಿಲ್ಲಿ ಮಸೀದಿಯಲ್ಲಿ ಭಾಗವಹಿಸಿದ್ದ ಇಂಡೋನೇಷ್ಯಾ ಹಾಗೂ ಮಲೇಶಿಯಾದ 62 ಪ್ರಜೆಗಳು ಕರ್ನಾಟಕಕ್ಕೆ ಬಂದಿರುವ ಬಗ್ಗೆ ಮಾಹಿತಿ ಲಭಿಸಿರುವುದಾಗಿ ಆರೋಗ್ಯ ಸಚಿವ ಬಿ.ಶ್ರೀರಾಮುಲು ಟ್ವೀಟ್ ನಲ್ಲಿ ತಿಳಿಸಿದ್ದಾರೆ.

Advertisement

62 ಮಂದಿಯಲ್ಲಿ 12 ಜನರನ್ನು ಪತ್ತೆ ಹಚ್ಚಿ ಕ್ವಾರಂಟೈನ್ ಮಾಡಲಾಗುತ್ತಿದೆ. ಭಾರತಕ್ಕೆ ಭೇಟಿ ಕೊಟ್ಟ ಇವರು ತಮ್ಮ ದೇಶಕ್ಕೆ ವಾಪಸ್ ಆಗದೆ ಇಲ್ಲೇ ಉಳಿದಿರುವವರನ್ನು ಗೃಹ ಇಲಾಖೆ ಹಾಗೂ ಆರೋಗ್ಯ ಇಲಾಖೆ ಕಾರ್ಯಾಚರಣೆ ನಡೆಸಿ, ಪತ್ತೆ ಹಚ್ಚಿ ಕ್ವಾರಂಟೈನ್ ಮಾಡಲಾಗುವುದು ಎಂದು ವಿವರಿಸಿದ್ದಾರೆ.


ದೆಹಲಿಯ ಬಾಂಗ್ಲಾವಲಿಯ ನಿಜಾಮುದ್ದೀನ್ ಜಮಾತ್ ಮಸೀದಿಯಲ್ಲಿ ನಡೆದ ಪ್ರಾರ್ಥನೆಯಲ್ಲಿ ಕರ್ನಾಟಕ ಮೂಲದ 300 ಜನರು ಭಾಗವಹಿಸಿದ್ದರು. ಇದರಲ್ಲಿ 40 ಜನರನ್ನು ಪತ್ತೆ ಹಚ್ಚಿದ್ದು, ಕ್ವಾರಂಟೈನ್ ಮಾಡಲಾಗುತ್ತಿದೆ. ಇವರಲ್ಲಿ 12 ಜನರನ್ನು ಕೋವಿಡ್ 19 ಪರೀಕ್ಷೆ ನಡೆಸಿದ ವರದಿ ನೆಗೆಟಿವ್ ಎಂದು ಬಂದಿರುವುದಾಗಿ ಟ್ವೀಟ್ ನಲ್ಲಿ ತಿಳಿಸಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next