Advertisement

ದರ್ಶನ್ ಬೆಂಬಲಿಗರಿಂದ ಬೆದರಿಕೆ : ಇಂದ್ರಜಿತ್ ಲಂಕೇಶ್ ಆರೋಪ

03:31 PM Jul 19, 2021 | Team Udayavani |

ಬೆಂಗಳೂರು: ದರ್ಶನ್​ ಪ್ರಚೋದನೆ ಮೂಲಕ ಅವರ​ ಹಿಂಬಾಲಕರು, ಅವರ​ ರೌಡಿಗಳು ಫೋನ್​ ಕರೆ ಹಾಗೂ ವಾಟ್ಸ್​ ಆಯಪ್​ ಮೂಲಕ ಬೆದರಿಕೆ ಹಾಕುತ್ತಿದ್ದಾರೆ ಎಂದು ಪತ್ರಕರ್ತ ಹಾಗೂ ಸಿನಿಮಾ ನಿರ್ದೇಶಕ ಇಂದ್ರಜಿತ್ ಲಂಕೇಶ್ ಆರೋಪಿಸಿದ್ದಾರೆ.

Advertisement

ಇಂದು ಮಾಧ್ಯಮಗೋಷ್ಠಿ ನಡೆಸಿ ಮಾತನಾಡಿರುವ ಇಂದ್ರಜಿತ್, ‘ಪ್ರಕರಣದ ಬಗ್ಗೆ ನಾನು ಏನನ್ನೂ ಮಾತನಾಡುವುದಿಲ್ಲ. ಅದನ್ನು ಕಾನೂನಾತ್ಮಕವಾಗಿ ಹೋರಾಡುತ್ತೇನೆ. ದರ್ಶನ್​ ಪ್ರಚೋದನೆ ಮೂಲಕ ದರ್ಶನ್​ ಹಿಂಬಾಲಕರು, ಅವರ​ ರೌಡಿಗಳು ಫೋನ್​ ಮೂಲಕ, ವಾಟ್ಸ್​ ಆಯಪ್​ ಮೂಲಕ ಬೆದರಿಕೆ ಹಾಕುತ್ತಿದ್ದಾರೆ. ಕಳೆದ 24 ಗಂಟೆಯಲ್ಲಿ ಪ್ರತಿ 30 ಸೆಕೆಂಡ್​ಗೆ ಒಂದು ಕರೆ ಬರ್ತಿದೆ. ಅಶ್ಲೀಲ ಚಿತ್ರಗಳಲ್ಲದೆ, ಅಶ್ಲೀಲ ಮೆಸೆಜ್​ ಮಾಡಲಾಗುತ್ತಿದೆ. ಹೀಗಾಗಿ ಸೈಬರ್​ ಕ್ರೈಮ್​ಗೆ ದೂರು ನೀಡುತ್ತಾ ಇದ್ದೇನೆ. ಇವರಿಗೆ ಪಾಠ ಕಲಿಸುತ್ತೇನೆ’ ಎಂದರು.

ಇನ್ನು ಮೈಸೂರಿನ ಹೋಟೆಲ್ ವೇಟರ್ ಮೇಲೆ ದರ್ಶನ್ ಹಲ್ಲೆ ಮಾಡಿದ್ದಾರೆ ಎಂದು ಇಂದ್ರಜಿತ್ ಲಂಕೇಶ್ ಆರೋಪಿಸಿದ್ದರು. ಈ ವಿಚಾರ ಇಬರಿಬ್ಬರ ನಡುವಿನ ಸಂಘರ್ಷಕ್ಕೆ ಕಾರಣವಾಯಿತು. ಮೊನ್ನೆ ಮಾಧ್ಯಮಗಳ ಎದುರು ಇಂದ್ರಜಿತ್ ವಿರುದ್ಧ ಆಕ್ರೋಶ ಹೊರಹಾಕಿದ ದರ್ಶನ್, ನನ್ನ ವಿರುದ್ಧದ ಆರೋಪಕ್ಕೆ ದಾಖಲೆ ಬಿಡುಗಡೆ ಮಾಡಿ ಎಂದು ಸವಾಲು ಹಾಕಿದರು. ಇದಕ್ಕೆ ಇಂದ್ರಜಿತ್ ಕೂಡ ಮರು ಸವಾಲು ಹಾಕಿದರು.

Advertisement

Udayavani is now on Telegram. Click here to join our channel and stay updated with the latest news.

Next