Advertisement

ಇಂದ್ರಾಳಿ ರಸ್ತೆ ದುರಸ್ತಿ: ಬದಲಿ ಮಾರ್ಗ ಬಳಕೆಗೆ ಸೂಚನೆ

12:23 AM Oct 20, 2022 | Team Udayavani |

ಉಡುಪಿ: ಇಂದ್ರಾಳಿ ರೈಲ್ವೇ ಮೇಲ್ಸೇತುವೆ ಬಳಿ ಬಾಕಿ ಇರುವ ಕಾಂಕ್ರೀಟ್‌ ಕಾಮಗಾರಿ ಭರದಿಂದ ನಡೆಯುತ್ತಿದ್ದು, ರೈಲ್ವೇ ಸೇತುವೆ ಮೂಲಕ ಭಾರೀ ವಾಹನ ಸಂಚಾರವನ್ನು ಕಡ್ಡಾಯವಾಗಿ ನಿಷೇಧಿಸಲಾಗಿದೆ. ವಾಹನಗಳ ದಟ್ಟಣೆಯಿಂದ ಸುಗಮ ಸಂಚಾರಕ್ಕೆ ಉಳಿದ ವಾಹನಗಳಿಗೆ ಅಡಚಣೆಯಾಗುತ್ತಿರುವ ಹಿನ್ನೆಲೆಯಲ್ಲಿ ಇತರ ವಾಹನಗಳು ಪರ್ಯಾಯ ಮಾರ್ಗದಲ್ಲಿ ಸಂಚರಿಸಬೇಕು ಎಂದು ಜಿಲ್ಲಾಧಿಕಾರಿಗಳು ಸೂಚಿಸಿದ್ದಾರೆ.

Advertisement

ಕುಂದಾಪುರ ಕಡೆಯಿಂದ ಬರುವ ಘನವಾಹನಗಳು ಅಂಬಾಗಿಲು- ಪೆರಂಪಳ್ಳಿ-ಮಣಿಪಾಲ ರಸ್ತೆ ಮೂಲಕ ಚಲಿಸುವುದು. ಉಡುಪಿಯಿಂದ ಬರುವ ಘನ ವಾಹನಗಳು ಕಲ್ಸಂಕ ಜಂಕ್ಷನ್‌ ಬಳಿ ಎಡಕ್ಕೆ ತಿರುವು ಪಡೆದು ಗುಂಡಿಬೈಲು ರಸ್ತೆ ಮೂಲಕ ಎ.ವಿ. ಬಾಳಿಗ ಆಸ್ಪತ್ರೆ ಬಳಿಯಿಂದ ಪೆರಂಪಳ್ಳಿ ರಸ್ತೆ ಮೂಲಕ ಮಣಿಪಾಲಕ್ಕೆ ಚಲಿಸುವುದು.

ಕಾರ್ಕಳ, ಹಿರಿಯಡ್ಕದಿಂದ ಬರುವ ಘನ ವಾಹನಗಳು ಮಣಿಪಾಲ- ಪೆರಂಪಳ್ಳಿ- ಅಂಬಾಗಿಲು ರಸ್ತೆ ಮೂಲಕ ಚಲಿಸುವುದು. ಉಡುಪಿಯಿಂದ ಮಣಿಪಾಲಕ್ಕೆ ಚಲಿಸುವ ದ್ವಿಚಕ್ರ ವಾಹನ, ಕಾರುಗಳು ಮತ್ತು ಬಸ್‌ಗಳು ಹಾಲಿ ಇಂದ್ರಾಳಿ ಸೇತುವೆ ಮೇಲೆ ಏಕಮುಖ ನಿರ್ಬಂಧಿತ ರೀತಿಯಲ್ಲಿ ಚಲಿಸುವಂತೆ ಜಿಲ್ಲಾಧಿಕಾರಿ ಕಚೇರಿ ಪ್ರಕಟನೆ ತಿಳಿಸಿದೆ.

Advertisement

Udayavani is now on Telegram. Click here to join our channel and stay updated with the latest news.

Next