Advertisement

ತುಮಕೂರಿನಲ್ಲಿ ಕೈಗಾರಿಕಾ ಕಾರಿಡಾರ್‌

12:38 PM Dec 31, 2020 | |

ಹೊಸದಿಲ್ಲಿ: ಆತ್ಮನಿರ್ಭರ ಭಾರತ್‌ ಅಡಿಯಲ್ಲಿ ಕೈಗಾರಿಕೆಗಳ ಅಭಿವೃದ್ಧಿ ಮತ್ತು ಉದ್ಯೋಗ ಸೃಷ್ಟಿ ಹೆಚ್ಚಿಸುವ ಸಲುವಾಗಿ ದಕ್ಷಿಣ ಭಾರತದ ಎರಡು ಪ್ರಮುಖ ಯೋಜನೆಗಳಿಗೆ ಪ್ರಧಾನಿ ಮೋದಿ ನೇತೃತ್ವದಲ್ಲಿ ನಡೆದ ಕೇಂದ್ರ ಸಚಿವ ಸಂಪುಟ ಸಭೆಯಲ್ಲಿ ಒಪ್ಪಿಗೆ ನೀಡಲಾಗಿದೆ.

Advertisement

ಕರ್ನಾಟಕದ ತುಮಕೂರು ಮತ್ತು ಆಂಧ್ರ ಪ್ರದೇಶದ ಕೃಷ್ಣಪಟ್ಟಣಂ ಕೈಗಾರಿಕಾ ಕಾರಿಡಾರ್‌ಗಳಿಗೆ ಅನುಮತಿ ನೀಡಲಾಗಿದೆ. ಈ ಎರಡೂ ಯೋಜನೆಗಳು ಚೆನ್ನೈ-ಬೆಂಗಳೂರು ಕೈಗಾರಿಕಾ ಕಾರಿಡಾರ್‌ನ ಅಡಿಯಲ್ಲಿ ಬರಲಿವೆ.

ತುಮಕೂರು ಕೈಗಾರಿಕಾ ಕಾರಿಡಾರ್‌ಗೆ 1,701 ಕೋಟಿ ರೂ. ನೀಡಲು ಸಂಪುಟ ಒಪ್ಪಿಗೆ ನೀಡಿದೆ. ಈ ಯೋಜನೆ ಒಟ್ಟು 88,500 ಮಂದಿಗೆ ಉದ್ಯೋಗಾವಕಾಶ ಒದಗಿಸುವ ನಿರೀಕ್ಷೆ ಇದೆ. ಇದರಲ್ಲಿ 17,700 ಮಂದಿಗೆ ಕೈಗಾರಿಕೆ ಸಂಬಂಧಿ ಸೇವಾ ಉದ್ಯಮಗಳಲ್ಲಿ ಅವಕಾಶ ಸಿಗಲಿದೆ. ಅತ್ತ ಆಂಧ್ರ ಪ್ರದೇಶದ ಕೃಷ್ಣಪಟ್ಟಣಂ ಕೈಗಾರಿಕಾ ಕಾರಿಡಾರ್‌ನ ಮೊದಲ ಹಂತದಲ್ಲಿಯೇ 98,000 ಮಂದಿಗೆ ಉದ್ಯೋಗ ಸಿಗುವ ಸಾಧ್ಯತೆ ಇದೆ.

Advertisement

Udayavani is now on Telegram. Click here to join our channel and stay updated with the latest news.

Next