Advertisement
ಉದ್ಯಮಗಳು ಎದುರಿಸುತ್ತಿರುವ ಸಮಸ್ಯೆಗಳು, ಲಾಕ್ಡೌನ್ ನಂತರದ ಆರ್ಥಿಕ ಪುನಶ್ಚೇತನಕ್ಕೆ ಕೈಗೊಳ್ಳಬಹುದಾದ ಕ್ರಮಗಳ ಬಗ್ಗೆ ಉದ್ಯಮ ವಲಯದ ಪ್ರಮುಖರೊಂದಿಗೆ ಬುಧವಾರ ವರ್ಚುವಲ್ ಸಭೆಯಲ್ಲಿ ಪಾಲ್ಗೊಂಡು ಅವರು ಮಾತನಾಡಿದರು.
Related Articles
Advertisement
ಕೋವಿಡ್ ಎರಡನೇ ಅಲೆ ಎದುರಿಸಲು ಸರ್ಕಾರದೊಂದಿಗೆ ಕೈಜೋಡಿಸಿದ ಕೈಗಾರಿಕೆಗಳು, ವಾಣಿಜ್ಯ ಸಂಘಟನೆಗಳಿಗೆ ಧನ್ಯವಾದ ತಿಳಿಸಿದ ಪಿ.ರವಿಕುರ್ಮಾ, ಆಹಾರ, ಔಷಧ ವಿತರಣೆ, ಆಮ್ಲಜನಕ ಪೂರೈಕೆ, ಅಗತ್ಯ ವಸ್ತುಗಳ ಸರಬರಾಜು, ಪೂರೈಕೆ ಸರಪಳಿಯಲ್ಲಿ ವ್ಯತ್ಯಯವಾಗದಂತೆ ಕಾರ್ಯ ನಿರ್ವಹಿಸುವ ಮೂಲಕ ಎಲ್ಲ ಕೈಗಾರಿಕೆಗಳು ಸಹಕಾರ ನೀಡಿವೆ. ಮುಂದೆ ಎದುರಾಗಲಿರುವ ಮೂರನೇ ಅಲೆಯನ್ನೂ ಸಮರ್ಥವಾಗಿ ಎದುರಿಸಲು ಸರ್ಕಾರ ಶ್ರಮವಹಿಸಿ ಮುನ್ನೆಚ್ಚರಿಕೆ ವಹಿಸುತ್ತಿದ್ದು, ಆ ಕಾರ್ಯಕ್ಕೂ ಉದ್ಯಮಗಳು ಸಹಕರಿಸಬೇಕು ಎಂದು ಮನವಿ ಮಾಡಿದರು.
ವಾಣಿಜ್ಯ ಮತ್ತು ಕೈಗಾರಿಕಾ ಇಲಾಖೆ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ರಾಜಕುಮಾರ್ ಖತ್ರಿ, ಆಯುಕ್ತೆ ಗುಂಜನ್ ಕೃಷ್ಣ, ಮುಖ್ಯಮಂತ್ರಿಗಳ ಕಾರ್ಯನೀತಿ ಸಲಹೆಗಾರ ಪ್ರಶಾಂತ್ ಪ್ರಕಾಶ್, ಉದ್ಯಮಿ ಟಿ.ವಿ.ಮೋಹನ್ ದಾಸ್ ಪೈ, ಫಿಕ್ಕಿ-ಕರ್ನಾಟಕ ಘಟಕದ ಅಧ್ಯಕ್ಷ ಉಲ್ಲಾಸ್ ಕಾಮತ್, ಎಫ್ಕೆಸಿಸಿಐ ಅಧ್ಯಕ್ಷ ಪೆರಿಕಲ್ ಎಂ. ಸುಂದರ್, ಉಪಾಧ್ಯಕ್ಷ ಐ.ಎಸ್.. ಪ್ರಸಾದ್, ಕಾಸಿಯಾ ಅಧ್ಯಕ್ಷ ಕೆ.ಬಿ.ಅರಸಪ್ಪ, ಆಟೋಮೊಬೈಲ್ ಅಸೋಸಿಯೇಷನ್ ವತಿಯಿಂದ ಎಂ.ಪಿ. ಶ್ಯಾಮ…, ಬೃಹತ್ ಬೆಂಗಳೂರು ಹೋಟೆಲ್ಗಳ ಸಂಘದ ಅಧ್ಯಕ್ಷ ಪಿ. ಸಿ. ರಾವ್, ಪೀಣ್ಯ ಕೈಗಾರಿಕಾ ಸಂಘದ ಅಧ್ಯಕ್ಷ ಪ್ರಕಾಶ್, ಐಟಿ ವಲಯದ ಪ್ರತಿನಿಧಿ ಪ್ರಹ್ಲಾದ್, ಅಸೋಚಾಮ್ ನಬಿ.ವಿ. ನಾಯ್ಡು, ಪ್ರವಾಸೋದ್ಯಮ ವಲಯದ ಪ್ರತಿನಿಧಿ ಶ್ಯಾಮರಾಜು, ಜವಳಿ ಉದ್ದಿಮೆ ವಲಯದಿಂದ ಆನಂದ್, ರಿಯಲ್ ಎಸ್ಟೇಟ್ ಉದ್ಯಮ ವತಿಯಿಂದ ಗೋವಿಂದರಾಜ್ ಪಾಲ್ಗೊಂಡಿದ್ದರು.
ಕೈಗಾರಿಕೆಗಳ ಪ್ರಮುಖ ಬೇಡಿಕೆಸೂಕ್ಷ್ಮ, ಸಣ್ಣ ಮತ್ತು ಮಧ್ಯಮ ಕೈಗಾರಿಕೆಗಳ ಕಾರ್ಮಿಕರನ್ನು ಮುಂಚೂಣಿ ಕಾರ್ಯಕರ್ತರೆಂದು ಪರಿಗಣಿಸಿ ಲಸಿಕೆ ನೀಡಬೇಕು. ಬಾರ್ ಅÂಂಡ್ ರೆಸ್ಟೋರೆಂಟ್ಗಳು ಸ್ಥಗಿತಗೊಂಡಿರುವುದರಿಂದ ಮಾಸಿಕ ಪರವಾನಗಿ ಶುಲ್ಕ (75,000 ರೂ.) ಪಾವತಿಗೆ ವಿನಾಯ್ತಿ ನೀಡಬೇಕು. ಲಾಕ್ಡೌನ್ ಅವಧಿಯಲ್ಲಿ ವಿದ್ಯುತ್ ಬಳಕೆ ಶುಲ್ಕ, ನಿಗದಿತ ಶುಲ್ಕ ಪಾವತಿಗೆ ವಿನಾಯ್ತಿ ಕೊಡಬೇಕು. ಗುಜರಾತ್, ಮಹಾರಾಷ್ಟ್ರ, ತಮಿಳುನಾಡಿನ ಪ್ರಮುಖ ಉದ್ಯಮಗಳಿಗೆ ಅಗತ್ಯ ಉತ್ಪನ್ನಗಳ ಪೂರೈಕೆಗೆ ತೊಂದರೆಯಾಗದಂತೆ ನೋಡಿಕೊಳ್ಳಬೇಕು. ಪೂರೈಕೆ ಸರಪಳಿಗೆ ಅಡ್ಡಿಯಾಗದಂತೆ ಉದ್ಯಮಗಳ ಪುನರಾರಂಭಕ್ಕೆ ಅವಕಾಶ ನೀಡಬೇಕು. ನಗರ ಪ್ರದೇಶದಲ್ಲೂ ನರೇಗಾ ಯೋಜನೆ ಜಾರಿಗೊಳಿಸಬೇಕು. ಉದ್ಯೋಗ ಸೃಷ್ಟಿಗೆ ಪೂರಕ ವಾತಾವರಣ ಕಲ್ಪಿಸಬೇಕು.