Advertisement

Industrialist, ಮಾಜಿ ಕಾಂಗ್ರೆಸ್ ಸಂಸದ ನವೀನ್ ಜಿಂದಾಲ್ ಬಿಜೆಪಿ ಸೇರ್ಪಡೆ

09:16 PM Mar 24, 2024 | Team Udayavani |

ಹೊಸದಿಲ್ಲಿ: ಕೈಗಾರಿಕೋದ್ಯಮಿ ಮತ್ತು ಮಾಜಿ ಸಂಸದ ನವೀನ್ ಜಿಂದಾಲ್ ಅವರು ಕಾಂಗ್ರೆಸ್ ತೊರೆದು ಭಾನುವಾರ ಬಿಜೆಪಿ ಸೇರ್ಪಡೆಯಾಗಿದ್ದಾರೆ. ಸೇರ್ಪಡೆಯಾದ ದಿನವೇ ಘೋಷಣೆಯಾದ ಪಟ್ಟಿಯಲ್ಲಿ ಹರಿಯಾಣದ ಕುರುಕ್ಷೇತ್ರದ ಟಿಕೆಟ್ ನೀಡಲಾಗಿದೆ.

Advertisement

ಹರಿಯಾಣದ ಸಿಎಂ ಆಗಿ ಆಯ್ಕೆಯಾಗಿರುವ ನಯಾಬ್ ಸಿಂಗ್ ಸೈನಿ ಅವರು ಕುರುಕ್ಷೇತ್ರ ಕ್ಷೇತ್ರವನ್ನು ಪ್ರತಿನಿಧಿಸುತ್ತಿದ್ದರು.

ಬಿಜೆಪಿ ಪ್ರಧಾನ ಕಾರ್ಯದರ್ಶಿ ವಿನೋದ್ ತಾವ್ಡೆ ಅವರ ಸಮ್ಮುಖದಲ್ಲಿ ಅವರು ಬಿಜೆಪಿಗೆ ಸೇರ್ಪಡೆಗೊಂಡರು, ಪಕ್ಷದಲ್ಲಿ ಜಿಂದಾಲ್ ಅವರ ಉಪಸ್ಥಿತಿಯು ದೇಶದ ಆರ್ಥಿಕತೆ ಮತ್ತು ಸಮೃದ್ಧಿಯನ್ನು ಹೆಚ್ಚಿಸುವ ಸರ್ಕಾರದ ಕಾರ್ಯಸೂಚಿಗೆ ಸಹಾಯ ಮಾಡುತ್ತದೆ. ಕ್ರೀಡೆ ಮತ್ತು ಶಿಕ್ಷಣದಲ್ಲೂ ತೀವ್ರ ಆಸಕ್ತಿ ಹೊಂದಿದ್ದಾರೆ ಎಂದು ತಾವ್ಡೆ ಹೇಳಿದರು.

ಪ್ರಧಾನಿ ನರೇಂದ್ರ ಮೋದಿ ಅವರ ‘ವಿಕಸಿತ್ ಭಾರತ್’ ಕಾರ್ಯಸೂಚಿಗೆ ಕೊಡುಗೆ ನೀಡಲು ಬಯಸುವುದಾಗಿ ನವೀನ್ ಜಿಂದಾಲ್ ಹೇಳಿದರು. ಜಿಂದಾಲ್ 2004-14ರ ವರೆಗೆ ಲೋಕಸಭೆಯಲ್ಲಿ ಕುರುಕ್ಷೇತ್ರ ಲೋಕಸಭಾ ಕ್ಷೇತ್ರವನ್ನು ಪ್ರತಿನಿಧಿಸಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next