Advertisement

INDvsENG; ಟೀಂ ಇಂಡಿಯಾದಿಂದ ಹೊರಬಿದ್ದ ಸಿರಾಜ್: ಕಾರಣ ತಿಳಿಸಿದ ಬಿಸಿಸಿಐ

12:47 PM Feb 02, 2024 | Team Udayavani |

ವಿಶಾಖಪಟ್ಟಣ: ಪ್ರವಾಸಿ ಇಂಗ್ಲೆಂಡ್ ವಿರುದ್ಧದ ಎರಡನೇ ಟೆಸ್ಟ್ ಪಂದ್ಯವು ವಿಶಾಖಪಟ್ಟಣದಲ್ಲಿ ಶುಕ್ರವಾರ ಆರಂಭವಾಗಿದೆ. ಟಾಸ್ ಗೆದ್ದ ಭಾರತವು ಮೊದಲು ಬ್ಯಾಟಿಂಗ್ ಆಯ್ಕೆ ಮಾಡಿಕೊಂಡಿದೆ. ಈ ಪಂದ್ಯಕ್ಕಾಗಿ ಭಾರತ ಮೂರು ಬದಲಾವಣೆ ಮಾಡಿಕೊಂಡಿದೆ.

Advertisement

ಬ್ಯಾಟರ್ ಕೆಎಲ್ ರಾಹುಲ್ ಮತ್ತು ಆಲ್ ರೌಂಡರ್ ರವೀಂದ್ರ ಜಡೇಜಾ ಅವರು ಗಾಯಗೊಂಡ ಕಾರಣ ಅವರು ವಿಶಾಖಪಟ್ಟಣ ಪಂದ್ಯದಲ್ಲಿ ಆಡುವುದಿಲ್ಲೆಂಬ ಖಚಿತತೆಯಿತ್ತು. ಅವರೊಂದಿಗೆ ವೇಗಿ ಮೊಹಮ್ಮದ್ ಸಿರಾಜ್ ಅವರೂ ಇಂದಿನ ಆಡುವ ಬಳಗದಲ್ಲಿ ಸ್ಥಾನ ಪಡೆದಿಲ್ಲ. ಅವರ ಬದಲಿಗೆ ಮುಖೇಶ್ ಕುಮಾರ್ ಆಡುತ್ತಿದ್ದಾರೆ.

ಸಿರಾಜ್ ಅವರು ತಂಡವನ್ನು ತೊರೆದಿದ್ದಾರೆ ಎಂದು ಬಿಸಿಸಿಐ ಹೇಳಿದೆ. ಅದಕ್ಕೆ ಕಾರಣವನ್ನೂ ಬಹಿರಂಗಪಡಿಸಿದೆ.

‘’ಸರಣಿಯ ಅವಧಿ ಮತ್ತು ಇತ್ತೀಚಿನ ದಿನಗಳಲ್ಲಿ ಅವರು ಆಡಿದ ಕ್ರಿಕೆಟ್ ಮೊತ್ತವನ್ನು ಗಮನದಲ್ಲಿಟ್ಟುಕೊಂಡು ಈ ನಿರ್ಧಾರವನ್ನು ತೆಗೆದುಕೊಳ್ಳಲಾಗಿದೆ. ರಾಜ್‌ಕೋಟ್‌ ನಲ್ಲಿ ನಡೆಯಲಿರುವ ಮೂರನೇ ಟೆಸ್ಟ್‌ ಗೆ ಆಯ್ಕೆಗೆ ಲಭ್ಯರಿರುತ್ತಾರೆ. ಅವೇಶ್ ಖಾನ್ ಎರಡನೇ ಟೆಸ್ಟ್‌ಗೆ ತಂಡವನ್ನು ಸೇರಿಕೊಂಡಿದ್ದಾರೆ” ಎಂದು ಬಿಸಿಸಿಐ ಪ್ರಕಟಣೆ ತಿಳಿಸಿದೆ.

ಕೆಎಲ್ ರಾಹುಲ್ ಬದಲಿಗೆ ರಜತ್ ಪಟಿದಾರ್, ರವೀಂದ್ರ ಜಡೇಜಾ ಬದಲು ಕುಲದೀಪ್ ಯಾದವ್ ಮತ್ತು ಸಿರಾಜ್ ಬದಲು ಮುಖೇಶ್ ಕುಮಾರ್ ಸ್ಥಾನ ಪಡೆದಿದ್ದಾರೆ.

Advertisement
Advertisement

Udayavani is now on Telegram. Click here to join our channel and stay updated with the latest news.

Next