Advertisement

INDvsSL ಏಕದಿನ ಸರಣಿ ಆರಂಭ: ಅವಕಾಶ ಪಡೆದ ಕನ್ನಡಿಗ; ಟಾಸ್ ಗೆದ್ದ ಲಂಕಾ

02:19 PM Aug 02, 2024 | Team Udayavani |

ಕೊಲಂಬೊ: ಟಿ20 ಸರಣಿಯನ್ನು ವೈಟ್ ವಾಶ್ ಮಾಡಿಕೊಂಡ ಟೀಂ ಇಂಡಿಯಾ (Team India) ಇದೀಗ ಏಕದಿನ ಚಾಲೆಂಜ್ ಗೆ ಸಜ್ಜಾಗಿದೆ. ಕೊಲಂಬೊದಲ್ಲಿ ನಡೆಯುತ್ತಿರುವ ಮೊದಲ ಏಕದಿನ ಪಂದ್ಯದಲ್ಲಿ ಟಾಸ್ ಗೆದ್ದ ಶ್ರೀಲಂಕಾ (Sri lanka) ಮೊದಲು ಬ್ಯಾಟಿಂಗ್ ಆಯ್ಕೆ ಮಾಡಿದೆ.

Advertisement

ಟಿ20 ವಿಶ್ವಕಪ್ ಬಳಿಕ ವಿಶ್ರಾಂತಿಯಲ್ಲಿದ್ದ ರೋಹಿತ್ ಶರ್ಮಾ, ವಿರಾಟ್ ಕೊಹ್ಲಿ, ಕುಲದೀಪ್ ಯಾದವ್ ತಂಡಕ್ಕೆ ಮರಳಿದ್ದಾರೆ. ಟಿ20 ವಿಶ್ವಕಪ್ ನಲ್ಲಿ ಅವಕಾಶ ಪಡೆದಿರದ ಕೆಎಲ್ ರಾಹುಲ್ ಮತ್ತು ಶ್ರೇಯಸ್ ಅಯ್ಯರ್ ಕೂಡಾ ತಂಡ ಸೇರಿದ್ದಾರೆ.

ಇಂದಿನ ಪಂದ್ಯದಲ್ಲಿ ವಿಕೆಟ್ ಕೀಪರ್ ಆಗಿ ಕನ್ನಡಿಗ ಕೆಎಲ್ ರಾಹುಲ್ ಅವಕಾಶ ಪಡೆದಿದ್ದಾರೆ. ಹೀಗಾಗಿ ರಿಷಭ್ ಪಂತ್ ಅವರು ಹೊರಗುಳಿದಿದ್ದಾರೆ. ಬಿಸಿಸಿಐ ಗುತ್ತಿಗೆಯಿಂದ ಹೊರಬಿದ್ದ ಬಳಿಕ ಶ್ರೇಯಸ್ ಅಯ್ಯರ್ ಮೊದಲ ಬಾರಿಗೆ ಆಡುವ ಅವಕಾಶ ಪಡೆದಿದ್ದಾರೆ. ಆಲ್ ರೌಂಡರ್ ವಿಭಾಗದಲ್ಲಿ ಶಿವಂ ದುಬೆ ಮತ್ತು ಅಕ್ಷರ್ ಪಟೇಲ್ ಆಡುತ್ತಿದ್ದಾರೆ.

ಶ್ರೀಲಂಕಾ ಪರ ಮೊಹಮ್ಮದ್ ಶಿರಾಜ್ ಏಕದಿನ ಕ್ರಿಕೆಟ್ ಗೆ ಪದಾರ್ಪಣೆ ಮಾಡಿದರು.

ತಂಡಗಳು

Advertisement

ಶ್ರೀಲಂಕಾ: ಪತುಮ್ ನಿಸ್ಸಾಂಕ, ಅವಿಷ್ಕ ಫೆರ್ನಾಂಡೋ, ಕುಸಲ್ ಮೆಂಡಿಸ್ (ವಿ.ಕೀ), ಸದೀರ ಸಮರವಿಕ್ರಮ, ಚರಿತ್ ಅಸಲಂಕಾ (ನಾ), ಜನಿತ್ ಲಿಯಾನಗೆ, ವಾನಿಂದು ಹಸರಂಗ, ದುನಿತ್ ವೆಲ್ಲಲಾಗೆ, ಅಖಿಲ ದನಂಜಯ, ಅಸಿತ ಫೆರ್ನಾಂಡೋ, ಮೊಹಮ್ಮದ್ ಶಿರಾಜ್

ಭಾರತ: ರೋಹಿತ್ ಶರ್ಮಾ (ನಾ), ಶುಭಮನ್ ಗಿಲ್, ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್, ಕೆಎಲ್ ರಾಹುಲ್ (ವಿ.ಕೀ), ಶಿವಂ ದುಬೆ, ವಾಷಿಂಗ್ಟನ್ ಸುಂದರ್, ಅಕ್ಷರ್ ಪಟೇಲ್, ಕುಲದೀಪ್ ಯಾದವ್, ಅರ್ಷದೀಪ್ ಸಿಂಗ್, ಮೊಹಮ್ಮದ್ ಸಿರಾಜ್

Advertisement

Udayavani is now on Telegram. Click here to join our channel and stay updated with the latest news.

Next