Advertisement

INDvsZIM: ಎರಡನೇ ಟಿ20 ಪಂದ್ಯದಲ್ಲಿ ಟಾಸ್ ಗೆದ್ದ ಭಾರತ; ತಂಡದಲ್ಲಿ ಒಂದು ಬದಲಾವಣೆ

04:12 PM Jul 07, 2024 | Team Udayavani |

ಹರಾರೆ: ಟಿ20 ವಿಶ್ವಕಪ್ ಗೆದ್ದ ಹುರುಪಿನಲ್ಲಿ ಜಿಂಬಾಬ್ವೆ ಪ್ರವಾಸಕ್ಕೆ ತೆರಳಿದ್ದ ಟೀಂ ಇಂಡಿಯಾ ಮೊದಲ ಪಂದ್ಯದಲ್ಲಿ ಭಾರೀ ಹಿನ್ನಡೆ ಅನುಭವಿಸಿತ್ತು. ಇದೀಗ ಮತ್ತೆ ಪುಟಿದೇಳುವ ವಿಶ್ವಾಸದಿಂದ ಎರಡನೇ ಪಂದ್ಯಕ್ಕೆ ಶುಬ್ಮನ್ ಗಿಲ್ ಪಡೆ ಸಜ್ಜಾಗಿದೆ.

Advertisement

ಹರಾರೆಯಲ್ಲಿ ಟಾಸ್ ಗೆದ್ದ ಭಾರತ ತಂಡವು ಮೊದಲು ಬ್ಯಾಟಿಂಗ್ ಆಯ್ಕೆ ಮಾಡಿಕೊಂಡಿದೆ. ಟೀಂ ಇಂಡಿಯಾ ಪರವಾಗಿ ಸಾಯಿ ಸುದರ್ಶನ್ ಅವರು ಅವಕಾಶ ಪಡೆದಿದ್ದು, ಖಲೀಲ್ ಅಹಮದ್ ಅವರು ಜಾಗ ಬಿಟ್ಟುಕೊಟ್ಟಿದ್ದಾರೆ.

ಯುವ ಪಡೆಯೊಂದಿಗೆ ಕಣಕ್ಕಿಳಿದಿದ್ದ ಗಿಲ್ ಪಡೆಗೆ ಮೊದಲ ಪಂದ್ಯದಲ್ಲಿ ಬ್ಯಾಟರ್ ಗಳು ಕೈಕೊಟ್ಟಿದ್ದರು. ನಾಯಕ ಗಿಲ್, ಆವೇಶ್ ಖಾನ್ ಬಿಟ್ಟರೆ ಬೇರಾವ ಬ್ಯಾಟರ್ ಗಳು ಎರಡಂಕಿ ಮೊತ್ತ ಗಳಿಸಲು ವಿಫಲರಾಗಿದ್ದರು. ಪದಾರ್ಪಣೆ ಮಾಡಿದ್ದ ಅಭಿಷೇಕ್ ಶರ್ಮಾ, ರಿಯಾನ್ ಪರಾಗ್ ಮತ್ತು ಜುರೆಲ್ ಸಂಪೂರ್ಣ ವಿಫಲರಾಗಿದ್ದರು. ಇಂದು ಮತ್ತೆ ತಮ್ಮನ್ನು ಸಾಬೀತು ಪಡಿಸಲು ಅವಕಾಶ ಸಿಕ್ಕಿದೆ.

ತಂಡಗಳು

ಭಾರತ: ಶುಬ್ಮನ್ ಗಿಲ್ (ನಾ), ಅಭಿಷೇಕ್ ಶರ್ಮಾ, ರುತುರಾಜ್ ಗಾಯಕ್ವಾಡ್, ಸಾಯಿ ಸುದರ್ಶನ್, ರಿಯಾನ್ ಪರಾಗ್, ರಿಂಕು ಸಿಂಗ್, ಧ್ರುವ್ ಜುರೆಲ್ (ವಿ.ಕೀ), ವಾಷಿಂಗ್ಟನ್ ಸುಂದರ್, ರವಿ ಬಿಷ್ಣೋಯ್, ಅವೇಶ್ ಖಾನ್, ಮುಖೇಶ್ ಕುಮಾರ್

Advertisement

ಜಿಂಬಾಬ್ವೆ: ವೆಸ್ಲಿ ಮಾಧೆವೆರೆ, ಇನೋಸೆಂಟ್ ಕೈಯಾ, ಬ್ರಿಯಾನ್ ಬೆನೆಟ್, ಸಿಕಂದರ್ ರಾಜ (ನಾ), ಡಿಯೋನ್ ಮೈಯರ್ಸ್, ಜೊನಾಥನ್ ಕ್ಯಾಂಪ್‌ಬೆಲ್, ಕ್ಲೈವ್ ಮದಂಡೆ (ವಿ.ಕೀ), ವೆಲ್ಲಿಂಗ್ಟನ್ ಮಸಕಜಾ, ಲ್ಯೂಕ್ ಜೊಂಗ್ವೆ, ಬ್ಲೆಸ್ಸಿಂಗ್ ಮುಜರಬಾನಿ, ಟೆಂಡೈ ಚಟಾರಾ

Advertisement

Udayavani is now on Telegram. Click here to join our channel and stay updated with the latest news.

Next