Advertisement

ಪ್ಯಾಕೇಜ್‌ ಘೋಷಣೆ: ಪಾಟೀಲ ಹರ್ಷ

11:47 AM May 13, 2020 | Naveen |

ಇಂಡಿ: ಪ್ರಧಾನಿ ನರೇಂದ್ರ ಮೋದಿ ಭಾರತಕ್ಕೆ 20 ಲಕ್ಷ ಕೋಟಿ ರೂ. ಬಂಪರ್‌ ಆರ್ಥಿಕ ಪ್ಯಾಕೇಜ್‌ ಘೋಷಣೆ ಮಾಡಿದ್ದನ್ನು ಸ್ವಾಗತಿಸುವುದಾಗಿ ಶಾಸಕ ಯಶವಂತ್ರಾಯಗೌಡ ಪಾಟೀಲ ಹೇಳಿದರು.

Advertisement

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ದೇಶದ ರೈತರು, ಸಣ್ಣ-ಅತೀ ಸಣ್ಣ ಮತ್ತು ಗೃಹ ಕೈಗಾರಿಕೆಗಳು, ಶ್ರಮಿಕರಿಗೂ ಸ್ವಾವಲಂಬಿ ಭಾರತಕ್ಕೆ ವಿಶೇಷ ಪ್ಯಾಕೇಜ್‌ ಘೋಷಣೆ ಮಾಡಿದ್ದಾರೆ. ಇದರಿಂದ ಆರ್ಥಿಕ ಸಂಕಷ್ಟ ಅನುಭವಿಸುತ್ತಿರುವ ಕೋಟ್ಯಂತರ ಜನರಿಗೆ ಅನುಕೂಲವಾಗುವ ಜೊತೆಗೆ ದೇಶಕ್ಕೆ ಒಳಿತಾಗಲಿದೆ. ಪ್ರಧಾನಿ ನರೇಂದ್ರ ಮೋದಿ ಮೇಕ್‌ ಇನ್‌ ಇಂಡಿಯಾಗೆ ಹೆಚ್ಚಿನ ಒತ್ತು ನೀಡುತ್ತಿದ್ದು ನಮ್ಮ ದೇಶದಲ್ಲೇ ವಸ್ತುಗಳ ಉತ್ಪಾದನೆಯಾದರೆ ದೇಶ ಆರ್ಥಿಕವಾಗಿಯೂ ಮುಂದೆ ಬರಲು ಸಾಧ್ಯವಾಗುತ್ತದೆ ಎಂದ ಅವರು ಪ್ರಧಾನಿ ಮೋದಿಯವರಿಗೆ ಅಭಿನಂದಿಸುವುದಾಗಿ ತಿಳಿಸಿದರು.

Advertisement

Udayavani is now on Telegram. Click here to join our channel and stay updated with the latest news.

Next