Advertisement

ಇಂಡಿ: ಕಬ್ಬಿನ ಗದ್ದೆಯಲ್ಲಿ ಅಕ್ರಮ ಬಂಧನದಲ್ಲಿರಿಸಿದ್ದ ಯುಪಿ ಮೂಲದ 45 ಕಾರ್ಮಿಕರ ರಕ್ಷಣೆ

05:21 PM Feb 11, 2022 | Shwetha M |

ಇಂಡಿ: ತಾಲೂಕಿನ ಗುಬ್ಬೇವಾಡ ಗ್ರಾಮದಲ್ಲಿ ಪೊಲೀಸರು ಭರ್ಜರಿ ಕಾರ್ಯಾಚರಣೆ ನಡೆಸಿ ಕಬ್ಬಿನ ಗದ್ದೆಯಲ್ಲಿ ಅಕ್ರಮವಾಗಿ ಬಂಧನದಲ್ಲಿಟ್ಟಿದ್ದ 10 ಮಕ್ಕಳು ಸೇರಿ 45 ಮಂದಿ ಮಧ್ಯಪ್ರದೇಶ ಮೂಲದ ಕಾರ್ಮಿಕರನ್ನು ರಕ್ಷಿಸಿದ ಘಟನೆ ನಡೆದಿದೆ.

Advertisement

ಗುಬ್ಬೇವಾಡ ಗ್ರಾಮದ ಕಬ್ಬಿನ ಗದ್ದೆಯಲ್ಲಿ ಜಮೀನು ಮಾಲೀಕ ಬಿರಾದಾರ್ ಹಾಗೂ ಮಧ್ಯಪ್ರದೇಶದ ರೋಹಿತ್ ಕಾರ್ಮಿಕರನ್ನುಅಕ್ರಮವಾಗಿ ಬಂಧನದಲ್ಲಿ ಇಟ್ಟಿದ್ದರು.

ಕಾರ್ಮಿಕರು 100 ಟನ್ ಕಬ್ಬು ಕಟಾವು ಮಾಡಿದ್ದರೂ 400 ಟನ್ ಕಬ್ಬು ಕಟಾವಿಗೆ ಬೆದರಿಕೆ ಹಾಕಿದ್ದರು. ರಕ್ಷಣೆಗಾಗಿ ಮಧ್ಯಪ್ರದೇಶ ಜಿಲ್ಲಾಧಿಕಾರಿಗಳಿಗೆ ಕಾರ್ಮಿಕರು ಕರೆ ಮಾಡಿದ್ದರು. ತದನಂತರ ಮಧ್ಯಪ್ರದೇಶದ ಡಿಸಿ ವಿಜಯಪುರ ಎಸ್ಪಿ ಅವರಿಗೆ ಕರೆ ಮಾಡಿ ಈ ಬಗ್ಗೆ ಮಾಹಿತಿ ನೀಡಿದರು. ನಂತರ ಇಂಡಿ ಪೊಲೀಸರು ಕಾರ್ಯಾಚರಣೆ ಮಾಡಿ ಮಧ್ಯಪ್ರದೇಶದ 10 ಮಕ್ಕಳು ಸೇರಿ 35 ಕಾರ್ಮಿಕರನ್ನು ಬಂಧನದಿಂದ ರಕ್ಷಿಸಿ, ರೈಲಿನಲ್ಲಿ ಮಧ್ಯಪ್ರದೇಶಕ್ಕೆ ಕಳುಹಿಸಿಕೊಡಲಾಯಿತು.

Advertisement

Udayavani is now on Telegram. Click here to join our channel and stay updated with the latest news.

Next