Advertisement

ಕಾರ್ಖಾನೆಗೆ ಕಬ್ಬು ಪೂರೈಸಲು ರೈತರಿಗೆ ಮನವಿ

06:24 PM Jul 02, 2020 | Naveen |

ಇಂಡಿ: ಮರಗೂರದ ಭೀಮಾಶಂಕರ ಸಹಕಾರಿ ಸಕ್ಕರೆ ಕಾರ್ಖಾನೆ 2019-20ನೇ ಸಾಲಿನ ಹಂಗಾಮಿನಲ್ಲಿ 2,82,462 ಮೆಟ್ರಿಕ್‌ ಟನ್‌ ಕಬ್ಬು ನುರಿಸಿದ್ದು ಪ್ರತಿ ಮೆಟ್ರಿಕ್‌ ಟನ್‌ಗೆ ನ್ಯಾಯ ಮತ್ತು ಲಾಭದಾಯಕ ಬೆಲೆ 2,833 ರೂ. ರಂತೆ ಪಾವತಿಸಲಾಗಿದೆ.

Advertisement

ಇದರಲ್ಲಿ ಕಬ್ಬು ಕಟಾವು ಮತ್ತು ಸಾರಿಗೆ ವೆಚ್ಚ ಸೇರಿರುತ್ತದೆ.ಅದರನ್ವಯ ಕಾರ್ಖಾನೆಯಿಂದ ರೈತರಿಗೆ ಪ್ರತಿ ಮೆಟ್ರಿಕ್‌ ಟನ್‌ಗೆ 3,249 ರೂ., ಕಬ್ಬು ಕಟಾವು ಮತ್ತು ಸಾರಿಗೆ ವೆಚ್ಚ ಸೇರಿ ಹಣವನ್ನು ಸಂದಾಯ ಮಾಡಲಾಗಿದೆ. ನ್ಯಾಯ ಮತ್ತು ಲಾಭದಾಯಕ ಬೆಲೆಗಿಂತ ಹೆಚ್ಚುವರಿಯಾಗಿ 416 ರೂ. ನಂತೆ ಕಬ್ಬಿನ ಬೆಲೆ ಪಾವತಿಸಲಾಗಿದೆ. ಈ ವರ್ಷ 2019-20ರ ಹಂಗಾಮಿನಲ್ಲಿ ಕಾರ್ಖಾನೆಗೆ ಕಬ್ಬು ಪೂರೈಸಿದ ರೈತರಿಗೆ ಸಂಪೂರ್ಣ ಕಬ್ಬಿನ ಬೆಲೆ ಸಂದಾಯ ಮಾಡಲಾಗಿದೆ.

ಆದ್ದರಿಂದ 2020-21ನೇ ಸಾಲಿನ ಕಬ್ಬು ನುರಿಸುವ ಹಂಗಾಮಿನಲ್ಲಿ ಭೀಮಾಶಂಕರ ಸಕ್ಕರೆ ಕಾರ್ಖಾನೆಗೆ ಹೆಚ್ಚಿನ ಪ್ರಮಾಣದಲ್ಲಿ ಕಬ್ಬು ಪೂರೈಸಬೇಕೆಂದು ಕಾರ್ಖಾನೆಯ ಅಧ್ಯಕ್ಷ, ಶಾಸಕ ಯಶವಂತರಾಯಗೌಡ ಪಾಟೀಲ ಹಾಗೂ ವ್ಯವಸ್ಥಾಪಕ ನಿರ್ದೇಶಕ ಶಿವ ಕುಲಕರ್ಣಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ

Advertisement

Udayavani is now on Telegram. Click here to join our channel and stay updated with the latest news.

Next