Advertisement

ಆಸ್ಪತ್ರೆ ಎಡವಟ್ಟಿನಿಂದ ಕ್ಯಾನ್ಸರ್‌ ಬಾಲಕಿಗೆ ಎಚ್‌ಐವಿ ಸೋಂಕು

09:19 AM Sep 16, 2017 | Team Udayavani |

ತಿರುವನಂತಪುರ: ರಕ್ತ ಕ್ಯಾನ್ಸರ್‌ನಿಂದ ಬಳಲುತ್ತಿದ್ದ ಬಾಲಕಿಗೆ ಹೊಸ ರಕ್ತ ನೀಡಿದ ಬಳಿಕ ಆಕೆಯಲ್ಲಿ ಎಚ್‌ಐವಿ ಸೋಂಕು ಇರುವುದು ಪತ್ತೆಯಾಗಿದೆ. ತಿರುವನಂತಪುರದ ಪ್ರಾದೇಶಿಕ ಕ್ಯಾನರ್‌ ಕೇಂದ್ರ (ಆರ್‌ಸಿಸಿ)ದಲ್ಲಿ ಈ ಎಡವಟ್ಟು ನಡೆದಿದೆ. ಬಾಲಕಿ ನೀಡಿದ ದೂರಿನ ಹಿನ್ನೆಲೆಯಲ್ಲಿ ಕೇರಳ ಸರಕಾರ ತನಿಖೆಗೆ ಆದೇಶ ನೀಡಿದೆ.

Advertisement

ಆಲಪ್ಪುಳ ವೈದ್ಯಕೀಯ ಕಾಲೇಜಿನಲ್ಲಿ ಬಾಲಕಿಗೆ ಆರಂಭಿಕ ಚಿಕಿತ್ಸೆ ನೀಡಲಾಗಿತ್ತು. ಬಳಿಕ ಆಕೆಯನ್ನು ತಿರುವನಂತಪುರದಲ್ಲಿ ಚಿಕಿತ್ಸೆ ಪಡೆಯುವಂತೆ ಸೂಚಿಸಲಾಗಿತ್ತು. ಇಲ್ಲಿಗೆ ಬಂದ ಬಳಿಕ ಹೊಸ ರಕ್ತ ನೀಡಲಾಯಿತು. ಕಣ್ಣಿನ ಒಂದು ಬದಿಯಲ್ಲಿ ಊತ ಕಂಡು ಬಂದ ಹಿನ್ನೆಲೆ ಯಲ್ಲಿ ವಿವಿಧ ಪರೀಕ್ಷೆಗಳನ್ನು ನಡೆಸಿದ ಈ ವೇಳೆ ಸೋಂಕು ಪತ್ತೆಯಾಯಿತು.  ಈ ಬಗ್ಗೆ ಬಾಲಕಿ ತಂದೆ ಪೊಲೀಸರಿಗೆ ದೂರು ನೀಡಿದ್ದರು.

ಕ್ಯಾನ್ಸರ್‌ ಸಂಸ್ಥೆ ಕೂಡ ಆಂತರಿಕವಾಗಿ ತನಿಖೆ ನಡೆಸುತ್ತಿದೆ ಎಂದು ಹೇಳಿಕೆ ನೀಡಿದೆ. ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ ಕೇರಳ ಆರೋಗ್ಯ ಸಚಿವೆ ಕೆ.ಕೆ.ಶೈಲಜಾ ವೈದ್ಯಕೀಯ ಶಿಕ್ಷಣ ಇಲಾಖೆ ನಿರ್ದೇಶಕರ ನೇತೃತ್ವದಲ್ಲಿ ಸಮಿತಿ ರಚಿಸಿ ವರದಿಗೆ ಸೂಚಿಸಿದ್ದಾರೆ. ಸರಕಾರ ಬಾಲಕಿಯ ಚಿಕಿತ್ಸಾ ವೆಚ್ಚ ಭರಿಸುವುದಾಗಿ ಹೇಳಿದೆ.

Advertisement

Udayavani is now on Telegram. Click here to join our channel and stay updated with the latest news.

Next