Advertisement

ಒಂದೇ ಮನೆಯ 13 ಜನಕ್ಕೆ ಸೋಂಕು

07:17 PM Mar 25, 2021 | Team Udayavani |

ಬಾಗಲಕೋಟೆ: ನಗರದ ಮಾರವಾಡಿ ಗಲ್ಲಿಯಲ್ಲಿ ಒಂದೇ ಕುಟುಂಬದ 13 ಜನರಿಗೆ ಕೊರೊನಾ ಸೋಂಕು ದೃಢಪಟ್ಟ ಹಿನ್ನೆಲೆಯಲ್ಲಿ ಸೋಂಕು ದೃಢಪಟ್ಟವರ ಮನೆಯ ಸುತ್ತಲಿನ 100 ಮೀಟರ್‌ ವ್ಯಾಪ್ತಿಯಲ್ಲಿ ಕಂಟೈನ್‌ ಮೆಂಟ್‌ ಝೋನ್‌ ನಿರ್ಮಿಸಲಾಗಿದ್ದು, ಜಿಲ್ಲಾಧಿಕಾರಿ ಕ್ಯಾಪ್ಟನ್‌ ಡಾ| ಕೆ.ರಾಜೇಂದ್ರ ಮತ್ತು ಜಿ.ಪಂ ಸಿಇಒ ಟಿ.ಭೂಬಾಲನ್‌ ಬುಧವಾರ ಭೇಟಿ ನೀಡಿ ಪರಿಶೀಲನೆ ನಡೆಸಿದರು.

Advertisement

ಕೋವಿಡ್‌ 2ನೇ ಅಲೇ ಭೀತಿ ಉಂಟಾಗಿದ್ದು, ಒಂದೇ ಕುಟುಂಬದ 13 ಜನರಿಗೆ ಸೋಂಕು ತಗಲಿರುವ ಬಗ್ಗೆ ಪರಿಶೀಲನೆ ನಡೆಸಲಾಗುತ್ತಿದೆ. ಸೋಂಕಿತ ಟ್ರಾವೆಲ್‌ ಹಿಸ್ಟರಿ ಕಲೆ ಹಾಕಲಾಗಿದ್ದು, ಸೋಂಕು ತಗಲಿದ ಮನೆಯ 3 ಜನ ಸದಸ್ಯರು ಹಾಗೂ ಡ್ರೆçವರ್‌ ಸೇರಿ ಸಾಂಗ್ಲಿಗೆ ಹೋಗಿ ಮಾ.14ರಂದು ಬಾಗಲಕೋಟೆಗೆ ಬಂದಿದ್ದಾರೆ. ಅವರ ಸಂಪರ್ಕದಿಂದ ಮನೆಯವರಿಗೆಲ್ಲ ಸೋಂಕು ಹರಡಿರುವ ಬಗ್ಗೆ ಶಂಕೆ ವ್ಯಕ್ತವಾಗುತ್ತಿದೆ ಎಂದು ಜಿಲ್ಲಾಧಿಕಾರಿಗಳು ತಿಳಿಸಿದರು.

ಸೋಂಕು ದೃಢಪಟ್ಟ ಮನೆಯ ಸುತ್ತಲಿನ ಕಂಟೈನ್‌ಮೆಂಟ್‌ ಝೋನ್‌ ವ್ಯಾಪ್ತಿಯಲ್ಲಿ 12 ಮನೆಗಳಿದ್ದು, ಪ್ರಾಥಮಿಕ ಮತ್ತು ಸೆಕೆಂಡರಿ ಸಂಪರ್ಕದ ಬಗ್ಗೆಯೂ ಮಾಹಿತಿ ಕಲೆ ಹಾಕಲಾಗುತ್ತಿದೆ. ಸೋಂಕು ದೃಢಪಟ್ಟ 13 ಜನರು ಚಿಕಿತ್ಸೆ ಪಡೆಯುತ್ತಿದ್ದು, ಯಾವುದೇ ರೀತಿಯ ತೊಂದರೆ ಇರುವದಿಲ್ಲ. ಸೋಂಕು ದೃಢಪಟ್ಟವರ ಪೈಕಿ ಓರ್ವ ವೃದ್ಧ ಮಹಿಳೆ ಜಿಲ್ಲಾ ಆಸ್ಪತ್ರೆ, ಮತ್ತೋರ್ವ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರೆ ಉಳಿದವರು ಹೋಮ್‌ ಐಸೋಲೇಷನ್‌ದಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ತಿಳಿಸಿದರು.

 

Advertisement

Udayavani is now on Telegram. Click here to join our channel and stay updated with the latest news.

Next