Advertisement

ವಿಮಾನ ನಿಲ್ದಾಣದಲ್ಲಿ ಮತ್ತೊಮ್ಮೆ ಸೋಂಕು ಪರೀಕ್ಷೆ

08:31 PM Sep 01, 2021 | Team Udayavani |

ಬೆಂಗಳೂರು: ಕೋವಿಡ್ ಮೂರನೇ ಅಲೆ ಭೀತಿ ಹಿನ್ನೆಲೆ ನೆರೆಯ ಬಾಂಗ್ಲಾದೇಶ, ಭೂತಾನ್‌, ಚೀನಾ ಸೇರಿದಂತೆ ಸೋಂಕು ಹೆಚ್ಚಿರುವ ಹೊರದೇಶಗಳಿಂದ ಬರುವ ಪ್ರಯಾಣಿಕರಿಗೆ ವಿಮಾನ ನಿಲ್ದಾಣಗಳಲ್ಲಿ ಕೋವಿಡ್ ಸೋಂಕು ಪರೀಕ್ಷೆ ಕಡ್ಡಾಯಗೊಳಿಸಲಾಗಿದೆ.

Advertisement

ಈ ಹಿಂದೆ ಇಂಗ್ಲೆಂಡ್‌, ದಕ್ಷಿಣ ಆಫ್ರಿಕಾ, ಬ್ರೆಜಿಲ್‌, ಯುರೋಪ್‌ ಹಾಗೂ ಮಧ್ಯ ಪೂರ್ವ ರಾಷ್ಟ್ರಗಳಿಂದ ರಾಜ್ಯಕ್ಕೆ ಬರುವ ಪ್ರಯಾಣಿಕರು ಕೋವಿಡ್ ಪರೀಕ್ಷೆ ಕಡ್ಡಾಯಗೊಳಿಸಲಾಗಿತ್ತು. ಬುಧವಾರ ರಾಜ್ಯ ಸರ್ಕಾರ ಹೊರಡಿಸಿರುವ ಪರಿಷ್ಕೃತ ಸುತ್ತೋಲೆಯಲ್ಲಿ ಬಾಂಗ್ಲಾದೇಶ, ಭೂತಾನ್‌, ಚೀನಾ, ಮಾರಿಷಿಯಸ್‌, ನ್ಯೂಜಿಲ್ಯಾಂಡ್‌ ಹಾಗೂ ಜಿಂಬಾಂಬ್ವೆಯಿಂದ ಬರುವ ಎಲ್ಲಾ ಪ್ರಯಾಣಿಕರಿಗೂ ಸೋಂಕು ಪರೀಕ್ಷೆ ಕಡ್ಡಾಯಗೊಳಿಸಲಾಗಿದೆ. ಈ ಕುರಿತು ರಾಜ್ಯದ ವಿಮಾಣ ನಿಲ್ದಾಣಗಳಲ್ಲಿ ಆಯಾ ಜಿಲ್ಲಾ ಆರೋಗ್ಯಾಧಿಕಾರಿಗಳು ಕ್ರಮಕೈಗೊಳ್ಳಬೇಕು ತಿಳಿಸಲಾಗಿದೆ.

ಇದನ್ನೂ ಓದಿ:ಪ್ರಚಾರಕ್ಕೆ ರಮೇಶ ಜಾರಕಿಹೊಳಿ ದಿಢೀರ್‌ ಎಂಟ್ರಿ

ರಾಜ್ಯದ ವಿಮಾನ ನಿಲ್ದಾಣಕ್ಕೆ ಆಗಮಿಸಿದ ಸಂದರ್ಭದಲ್ಲಿ ಸೋಂಕು ಪರೀಕ್ಷಾ ವರದಿ ಇದ್ದರೂ, ಮತ್ತೊಮ್ಮೆ ಇಲ್ಲಿ ಪರೀಕ್ಷೆ ನಡೆಸಬೇಕು. ಪ್ರಯಾಣಿರು ಗಂಟಲು ದ್ರವ ನೀಡಿ ಮನೆಗೆ ತೆರಳಬಹುದು. ಪರೀಕ್ಷಾ ವರದಿ ಬರುವರೆಗೂ ಹೋಂ ಕ್ವಾರಂಟೈನ್‌ ಇರಬೇಕು. ರೂಪಾಂತರ ಸೋಂಕು ಹೆಚ್ಚಿರುವ ಬ್ರೆಜಿಲ್‌, ದಕ್ಷಿಣ ಆಫ್ರಿಕಾದಿಂದ ಬರುವವರು ಮಾತ್ರ ವಿಮಾನ ನಿಲ್ದಾಣದಲ್ಲಿ ಆರ್‌ಟಿಪಿಸಿಆರ್‌ ಪರೀಕ್ಷೆಗೆ ಮಾದರಿ ನೀಡಿ, ವರದಿ ಬರುವವರೆಗೂ ಕಾಯಬೇಕು. ನೆಗೆಟಿವ್‌ ಬಂದರೆ ಮಾತ್ರ ಮನೆಗೆ ತೆರಳಬಹುದು ಎಂದು ಆರೋಗ್ಯ ಇಲಾಖೆಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಜಾವೇದ್‌ ಆಖ್ತರ್‌ ಸುತ್ತೋಲೆ ಹೊರಡಿಸಿದ್ದಾರೆ.

ಪ್ರೊಪೋಸಲ್‏ಗೆ ನಿರೀಕ್ಷಿಸುತ್ತಿದ್ದೀರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

Advertisement

Udayavani is now on Telegram. Click here to join our channel and stay updated with the latest news.

Next